ಜಿಲ್ಲೆಗಳು

ರಿಂಗ್ ರಸ್ತೆ ಉತ್ತನಹಳ್ಳಿ ಕ್ರಾಸ್ ಬಳಿ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

ಮೈಸೂರು: ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟಿದೆ.

ಸುಮಾರು 6 ವರ್ಷದ ಗಂಡು ಚಿರತೆ ರಸ್ತೆ ದಾಟುವ ಯತ್ನದಲ್ಲಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಮಾಹಿತಿ ತಿಳಿದ ತಕ್ಷಣ ಅರಣ್ಯಾಧಿಕಾರಿಗಳು ಮತ್ತು
ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಚಿರತೆ ಮೃತಪಟ್ಟಿದೆ.
ಮೃತ ಚಿರತೆಯ ಶವವನ್ನು ಪ್ರಮಾಣಿತ ಕಾರ್ಯಾಚರಣೆಯ ವಿಧಾನದ ಪ್ರಕಾರ ವಿಲೇವಾರಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಚಾಮುಂಡಿ ಬೆಟ್ಟದ ಭಾಗದಲ್ಲಿರುವ ಚಿರತೆಗಳು ಆಹಾರ ಅರಸಿ ರಿಂಗ್ ರಸ್ತೆ ದಾಟಿ ಬರುವುದು ಹೊಸದಲ್ಲವಾದರೂ ಚಿರತೆ ವಾಹನ ಡಿಕ್ಕಿಯಾಗಿ ಮೃತಪಟ್ಡಿರುವುದು ಇದೇ ಮೊದಲು.

andolanait

Recent Posts

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

39 seconds ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

23 mins ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

50 mins ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

59 mins ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

1 hour ago

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…

1 hour ago