ಮೈಸೂರು: ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟಿದೆ.
ಸುಮಾರು 6 ವರ್ಷದ ಗಂಡು ಚಿರತೆ ರಸ್ತೆ ದಾಟುವ ಯತ್ನದಲ್ಲಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಮಾಹಿತಿ ತಿಳಿದ ತಕ್ಷಣ ಅರಣ್ಯಾಧಿಕಾರಿಗಳು ಮತ್ತು
ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಚಿರತೆ ಮೃತಪಟ್ಟಿದೆ.
ಮೃತ ಚಿರತೆಯ ಶವವನ್ನು ಪ್ರಮಾಣಿತ ಕಾರ್ಯಾಚರಣೆಯ ವಿಧಾನದ ಪ್ರಕಾರ ವಿಲೇವಾರಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಚಾಮುಂಡಿ ಬೆಟ್ಟದ ಭಾಗದಲ್ಲಿರುವ ಚಿರತೆಗಳು ಆಹಾರ ಅರಸಿ ರಿಂಗ್ ರಸ್ತೆ ದಾಟಿ ಬರುವುದು ಹೊಸದಲ್ಲವಾದರೂ ಚಿರತೆ ವಾಹನ ಡಿಕ್ಕಿಯಾಗಿ ಮೃತಪಟ್ಡಿರುವುದು ಇದೇ ಮೊದಲು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…