ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ನಡೆದ ಗಲಾಟೆಯಲ್ಲಿ ಅಮಾಯಕ ವೃದ್ಧ ಬಲಿಯಾದ ಘಟನೆ ಮೈಸೂರು ವಿದ್ಯಾರಣ್ಯಪುರಂನಲ್ಲಿ ನಡೆದಿದೆ.
ನಗರದ ವಿದ್ಯಾರಣ್ಯಪುರಂ ಬಳಿಯ ಸೂಯೆಜ್ ಫಾರಂ ಗೇಟ್ ಬಳಿ ವೆಂಕಟೇಶ್ ಹಾಗೂ ಆಕಾಶ್ ಎಂಬುವರು ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಯುವಕರ ನಡುವೆ ನಡೆದ ಹೊಡೆದಾಟದಲ್ಲಿ ಅಗ್ರಹಾರದ ನಿವಾಸಿ ಲಿಂಗಣ್ಣ(70) ಸಾವನ್ನಪ್ಪಿದ ವೃದ್ದ ಸಾವನ್ನಪ್ಪಿದ್ದಾನೆ.
ಇಬ್ಬರು ಯುವಕರ ನಡುವಿನ ಗಲಾಟೆ ಹೊಡೆದಾಟಕ್ಕೆ ತಿರುಗಿದೆ. ಕ್ರಿಕೆಟ್ ಬ್ಯಾಟ್ ತಂದ ವೆಂಕಟೇಶ್ ಜೋರಾಗಿ ಆಕಾಶ್ ಮೇಲೆ ಬೀಸಿದ್ದಾನೆ.ಆಕಾಶ್ ತಲೆ ಬಗ್ಗಿಸಿ ತಪ್ಪಿಸಿಕೊಂಡಿದ್ದಾನೆ.
ಗುರಿ ತಪ್ಪಿದ ಬ್ಯಾಟ್ ಗಲಾಟೆ ನೋಡುತ್ತಾ ನಿಂತಿದ್ದ ವೃದ್ದ ಲಿಂಗಣ್ಣ ಮೇಲೆ ಬಿದ್ದಿದೆ.ಸ್ಥಳದಲ್ಲೇ ಕುಸಿದುಬಿದ್ದ ಲಿಂಗಣ್ಣ ರವರನ್ನ ಕೂಡಲೇ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಲಿಂಗಣ್ಣ ಮೃತಪಟ್ಟಿದ್ದಾರೆ.
ಬ್ಯಾಟ್ ಬೀಸಿದ ವೆಂಕಟೇಶ್ನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಯುವಕ ತಲೆಮರಿಸಿಕೊಂಡಿದ್ದಾನೆ.
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…