ಹನೂರು : ತಿರುಗಾಡುವ ರಸ್ತೆಯನ್ನೇ ಕೆಲವರು ಒತ್ತುವರಿ ಮಾಡಿಕೊಂಡಿದ್ದು, ರಸ್ತೆ ಬಿಡಿಸಿಕೊಡುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಂಚಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.
ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾoಚಳ್ಳಿ ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದು ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ತಿರುಗಾಡಲು ರಸ್ತೆಯೇ ಇಲ್ಲದಂತಾಗಿದೆ.
ಕಿರಿದಾದ ರಸ್ತೆ : ಕೆಲವೊಂದು ಮನೆಗಳಿಗೆ ತೀರಾ ಕಿರಿದಾದ ರಸ್ತೆ ಇದ್ದು ದ್ವಿ ಚಕ್ರ ವಾಹನ ಮಾತ್ರ ಸಂಚರಿಸಲು ಅವಕಾಶವಿದ್ದು ಉಳಿದಂತೆ ತುಂಬಾ ತೊಂದರೆಯಾಗಿದೆ .ಅಲ್ಲದೆ ಮಳೆಗಾಲದಲ್ಲಂತು ಇವರ ಕಷ್ಟ ಹೇಳತೀರದಾಗಿದೆ. ಹಾಗಾಗಿ ಒತ್ತುವರಿಯಾಗಿರುವ ರಸ್ತೆಯನ್ನು ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿದಿಗಳು ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಾಕಷ್ಟು ಬಾರಿ ಮನವಿ ಸಲ್ಲಿಸಿರುವ ಗ್ರಾಮಸ್ಥರು : ಈ ವಿಚಾರವಾಗಿ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿದಿನಗಳಿಗೆ ಮನವಿಯನ್ನು ಲಿಖಿತವಾಗಿಯೇ ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಅಲ್ಲದೆ ಸರ್ಕಾರಿ ನೀತಿ ನಿಯಮಗಳ ಪ್ರಕಾರ ಒತ್ತುವರಿಯಾಗಿರುವುದನ್ನು ಸರಿಪಡಿಸಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಅಧಿಕಾರಿಗಳು ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಲಿಖಿತ ಮನವಿ ಕೊಟ್ಟು ಸಾಕಷ್ಟು ತಿಂಗಳೇ ಕಳೆದಿದ್ದರು ಇತ್ತ ಗಮನಹರಿಸದೆ ಇರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಇನ್ನು ಮುಂದಾದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಒತ್ತುವರಿದಾರರಿಗೆ ದಾಖಲಾತಿ ಒದಗಿಸುವಂತೆ ನೋಟಿಸ್ ನೀಡಲಾಗಿದೆ .ಆದರೆ ಇದುವರೆಗೂ ದಾಖಲೆಗಳನ್ನು ನೀಡಿಲ್ಲ. ಸಿಸಿರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಲು ಕ್ರಿಯೆ ಯೋಜನೆ ರೂಪಿಸಿ ಅನುಮೋದನೆ ಪಡೆಯಲಾಗಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಒತ್ತುವರಿ ತೆರವುಗೊಳಿಸಿ ರಸ್ತೆ ಕಾಮಗಾರಿ ಮಾಡಲಾಗುವುದು.
ಸುರೇಶ್ ಪಿಡಿಒ ಸೂಳೇರಿಪಾಳ್ಯ
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…