ಜಿಲ್ಲೆಗಳು

ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ಹನೂರು : ತಿರುಗಾಡುವ ರಸ್ತೆಯನ್ನೇ ಕೆಲವರು ಒತ್ತುವರಿ ಮಾಡಿಕೊಂಡಿದ್ದು, ರಸ್ತೆ ಬಿಡಿಸಿಕೊಡುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಂಚಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.

ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾoಚಳ್ಳಿ ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದು ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ತಿರುಗಾಡಲು ರಸ್ತೆಯೇ ಇಲ್ಲದಂತಾಗಿದೆ.

ಕಿರಿದಾದ ರಸ್ತೆ : ಕೆಲವೊಂದು ಮನೆಗಳಿಗೆ ತೀರಾ ಕಿರಿದಾದ ರಸ್ತೆ ಇದ್ದು ದ್ವಿ ಚಕ್ರ ವಾಹನ ಮಾತ್ರ ಸಂಚರಿಸಲು ಅವಕಾಶವಿದ್ದು ಉಳಿದಂತೆ ತುಂಬಾ ತೊಂದರೆಯಾಗಿದೆ .ಅಲ್ಲದೆ ಮಳೆಗಾಲದಲ್ಲಂತು ಇವರ ಕಷ್ಟ ಹೇಳತೀರದಾಗಿದೆ. ಹಾಗಾಗಿ ಒತ್ತುವರಿಯಾಗಿರುವ ರಸ್ತೆಯನ್ನು ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿದಿಗಳು ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಾಕಷ್ಟು ಬಾರಿ ಮನವಿ ಸಲ್ಲಿಸಿರುವ ಗ್ರಾಮಸ್ಥರು : ಈ ವಿಚಾರವಾಗಿ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿದಿನಗಳಿಗೆ ಮನವಿಯನ್ನು ಲಿಖಿತವಾಗಿಯೇ ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಅಲ್ಲದೆ ಸರ್ಕಾರಿ ನೀತಿ ನಿಯಮಗಳ ಪ್ರಕಾರ ಒತ್ತುವರಿಯಾಗಿರುವುದನ್ನು   ಸರಿಪಡಿಸಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಅಧಿಕಾರಿಗಳು ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಲಿಖಿತ ಮನವಿ ಕೊಟ್ಟು ಸಾಕಷ್ಟು ತಿಂಗಳೇ ಕಳೆದಿದ್ದರು ಇತ್ತ ಗಮನಹರಿಸದೆ ಇರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಇನ್ನು ಮುಂದಾದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಒತ್ತುವರಿದಾರರಿಗೆ ದಾಖಲಾತಿ ಒದಗಿಸುವಂತೆ ನೋಟಿಸ್ ನೀಡಲಾಗಿದೆ .ಆದರೆ ಇದುವರೆಗೂ ದಾಖಲೆಗಳನ್ನು ನೀಡಿಲ್ಲ. ಸಿಸಿರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಲು ಕ್ರಿಯೆ ಯೋಜನೆ ರೂಪಿಸಿ ಅನುಮೋದನೆ ಪಡೆಯಲಾಗಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಒತ್ತುವರಿ ತೆರವುಗೊಳಿಸಿ ರಸ್ತೆ ಕಾಮಗಾರಿ ಮಾಡಲಾಗುವುದು.

ಸುರೇಶ್ ಪಿಡಿಒ ಸೂಳೇರಿಪಾಳ್ಯ

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago