ಜಿಲ್ಲೆಗಳು

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಚಾಲನೆ

ಹನೂರು: ನಮ್ಮ ಕ್ಷೇತ್ರಕ್ಕೆ ಟಿಬೆಟಿಯನ್ ನಿರಾಶ್ರಿತರ ಬಂದು ನಲವತ್ತು ವರ್ಷಗಳು ಕಳೆದಿದೆ.ಇದುವರೆಗೆ ಯಾವುದೇ ವಿಚಾರಕ್ಕೂ ಒಂದು ಸಣ್ಣ ಗಲಭೆ ನಡೆಯದಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ತಾಲ್ಲೂಕಿನ ಕೊಳ್ಳೇಗಾಲ ಹಾಸನೂರು ರಸ್ತೆಯಿಂದ ಟಿಬೆಟ್ ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಟಿಬೆಟಿಯನ್ ಕಾಲೋನಿಯಲ್ಲಿನ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಸೌಹಾರ್ದಯುತವಾಗಿ ಜೀವನ ನಡೆಸುತ್ತಿದ್ದಾರೆ.ಇವರು ನಮ್ಮ ಭಾಗದ ರೈತರಿಗೆ ಮಾದರಿಯಾಗಿದ್ದಾರೆ. ಕಾಲೋನಿಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿಲೇಜ್ ಗಳಿದ್ದು .ಈ ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಸರಿಯಾದ ರಸ್ತೆಯಿರಲಿಲ್ಲ . ಈ ಹಿನ್ನೆಲೆ ಕಳೆದ 5 ತಿಂಗಳ ಹಿಂದೆ 5ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಪೂರ್ಣಗೊಂಡಿದೆ. ಇದೀಗ ಬಾಕಿ ಉಳಿದಿದ್ದ 3 ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ 6ಕೋಟಿ ಅನುದಾನ ನೀಡಿರುವುದರಿಂದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಇಪ್ಪತ್ತು ವರ್ಷಗಳು ಬಾಳಿಕೆ ಬರುವಂತೆ ಕಾಮಗಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಟಿಬೆಟಿಯನ್ ಹನೂರು ಪ್ರಾಂತ್ಯದ ಅಧ್ಯಕ್ಷ ಗೇಲಿಕ್ ಜೋನಿ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್ ,ಲೋಕೋಪಯೋಗಿ ಎಇಇರಾಜೇಶ್ ಮುನ್ಸಿ,ಎಇ ಚಿನ್ನಣ್ಣ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್ ‘ಮುಖಂಡರುಗಳಾದ ಪುಟ್ಟ ವೀರ ನಾಯ್ಕ, ಜಗದೀಶ್, ಸತೀಶ್ ,ಪಿಡಿಒ ರಾಜು, ಗುತ್ತಿಗೆದಾರ ಅಮೃತೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

8 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

10 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

11 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

11 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

11 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

11 hours ago