ಜಿಲ್ಲೆಗಳು

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಚಾಲನೆ

ಹನೂರು: ನಮ್ಮ ಕ್ಷೇತ್ರಕ್ಕೆ ಟಿಬೆಟಿಯನ್ ನಿರಾಶ್ರಿತರ ಬಂದು ನಲವತ್ತು ವರ್ಷಗಳು ಕಳೆದಿದೆ.ಇದುವರೆಗೆ ಯಾವುದೇ ವಿಚಾರಕ್ಕೂ ಒಂದು ಸಣ್ಣ ಗಲಭೆ ನಡೆಯದಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ತಾಲ್ಲೂಕಿನ ಕೊಳ್ಳೇಗಾಲ ಹಾಸನೂರು ರಸ್ತೆಯಿಂದ ಟಿಬೆಟ್ ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಟಿಬೆಟಿಯನ್ ಕಾಲೋನಿಯಲ್ಲಿನ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಸೌಹಾರ್ದಯುತವಾಗಿ ಜೀವನ ನಡೆಸುತ್ತಿದ್ದಾರೆ.ಇವರು ನಮ್ಮ ಭಾಗದ ರೈತರಿಗೆ ಮಾದರಿಯಾಗಿದ್ದಾರೆ. ಕಾಲೋನಿಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿಲೇಜ್ ಗಳಿದ್ದು .ಈ ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಸರಿಯಾದ ರಸ್ತೆಯಿರಲಿಲ್ಲ . ಈ ಹಿನ್ನೆಲೆ ಕಳೆದ 5 ತಿಂಗಳ ಹಿಂದೆ 5ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಪೂರ್ಣಗೊಂಡಿದೆ. ಇದೀಗ ಬಾಕಿ ಉಳಿದಿದ್ದ 3 ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ 6ಕೋಟಿ ಅನುದಾನ ನೀಡಿರುವುದರಿಂದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಇಪ್ಪತ್ತು ವರ್ಷಗಳು ಬಾಳಿಕೆ ಬರುವಂತೆ ಕಾಮಗಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಟಿಬೆಟಿಯನ್ ಹನೂರು ಪ್ರಾಂತ್ಯದ ಅಧ್ಯಕ್ಷ ಗೇಲಿಕ್ ಜೋನಿ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್ ,ಲೋಕೋಪಯೋಗಿ ಎಇಇರಾಜೇಶ್ ಮುನ್ಸಿ,ಎಇ ಚಿನ್ನಣ್ಣ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್ ‘ಮುಖಂಡರುಗಳಾದ ಪುಟ್ಟ ವೀರ ನಾಯ್ಕ, ಜಗದೀಶ್, ಸತೀಶ್ ,ಪಿಡಿಒ ರಾಜು, ಗುತ್ತಿಗೆದಾರ ಅಮೃತೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

22 mins ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

29 mins ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

36 mins ago

ಮಾರ್ಚ್.‌10ರ ಬಳಿಕ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ.?

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು…

42 mins ago

ಓದುಗರ ಪತ್ರ: ಲಂಚದ ಹಾವಳಿಗೆ ಕಡಿವಾಣ ಹಾಕಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ…

45 mins ago

ಓದುಗರ ಪತ್ರ: ಗ್ಯಾರಂಟಿ ಯೋಜನೆಗೆ ಪರಿಶಿಷ್ಟರ ಮೀಸಲು ಹಣ ಬಳಸಬೇಡಿ

ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ…

47 mins ago