ಹನೂರು: ನಮ್ಮ ಕ್ಷೇತ್ರಕ್ಕೆ ಟಿಬೆಟಿಯನ್ ನಿರಾಶ್ರಿತರ ಬಂದು ನಲವತ್ತು ವರ್ಷಗಳು ಕಳೆದಿದೆ.ಇದುವರೆಗೆ ಯಾವುದೇ ವಿಚಾರಕ್ಕೂ ಒಂದು ಸಣ್ಣ ಗಲಭೆ ನಡೆಯದಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ತಾಲ್ಲೂಕಿನ ಕೊಳ್ಳೇಗಾಲ ಹಾಸನೂರು ರಸ್ತೆಯಿಂದ ಟಿಬೆಟ್ ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಟಿಬೆಟಿಯನ್ ಕಾಲೋನಿಯಲ್ಲಿನ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಸೌಹಾರ್ದಯುತವಾಗಿ ಜೀವನ ನಡೆಸುತ್ತಿದ್ದಾರೆ.ಇವರು ನಮ್ಮ ಭಾಗದ ರೈತರಿಗೆ ಮಾದರಿಯಾಗಿದ್ದಾರೆ. ಕಾಲೋನಿಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿಲೇಜ್ ಗಳಿದ್ದು .ಈ ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಸರಿಯಾದ ರಸ್ತೆಯಿರಲಿಲ್ಲ . ಈ ಹಿನ್ನೆಲೆ ಕಳೆದ 5 ತಿಂಗಳ ಹಿಂದೆ 5ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಪೂರ್ಣಗೊಂಡಿದೆ. ಇದೀಗ ಬಾಕಿ ಉಳಿದಿದ್ದ 3 ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ 6ಕೋಟಿ ಅನುದಾನ ನೀಡಿರುವುದರಿಂದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಇಪ್ಪತ್ತು ವರ್ಷಗಳು ಬಾಳಿಕೆ ಬರುವಂತೆ ಕಾಮಗಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಟಿಬೆಟಿಯನ್ ಹನೂರು ಪ್ರಾಂತ್ಯದ ಅಧ್ಯಕ್ಷ ಗೇಲಿಕ್ ಜೋನಿ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್ ,ಲೋಕೋಪಯೋಗಿ ಎಇಇರಾಜೇಶ್ ಮುನ್ಸಿ,ಎಇ ಚಿನ್ನಣ್ಣ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್ ‘ಮುಖಂಡರುಗಳಾದ ಪುಟ್ಟ ವೀರ ನಾಯ್ಕ, ಜಗದೀಶ್, ಸತೀಶ್ ,ಪಿಡಿಒ ರಾಜು, ಗುತ್ತಿಗೆದಾರ ಅಮೃತೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…