ಹನೂರು: ನಮ್ಮ ಕ್ಷೇತ್ರಕ್ಕೆ ಟಿಬೆಟಿಯನ್ ನಿರಾಶ್ರಿತರ ಬಂದು ನಲವತ್ತು ವರ್ಷಗಳು ಕಳೆದಿದೆ.ಇದುವರೆಗೆ ಯಾವುದೇ ವಿಚಾರಕ್ಕೂ ಒಂದು ಸಣ್ಣ ಗಲಭೆ ನಡೆಯದಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ತಾಲ್ಲೂಕಿನ ಕೊಳ್ಳೇಗಾಲ ಹಾಸನೂರು ರಸ್ತೆಯಿಂದ ಟಿಬೆಟ್ ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಟಿಬೆಟಿಯನ್ ಕಾಲೋನಿಯಲ್ಲಿನ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಸೌಹಾರ್ದಯುತವಾಗಿ ಜೀವನ ನಡೆಸುತ್ತಿದ್ದಾರೆ.ಇವರು ನಮ್ಮ ಭಾಗದ ರೈತರಿಗೆ ಮಾದರಿಯಾಗಿದ್ದಾರೆ. ಕಾಲೋನಿಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿಲೇಜ್ ಗಳಿದ್ದು .ಈ ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಸರಿಯಾದ ರಸ್ತೆಯಿರಲಿಲ್ಲ . ಈ ಹಿನ್ನೆಲೆ ಕಳೆದ 5 ತಿಂಗಳ ಹಿಂದೆ 5ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಪೂರ್ಣಗೊಂಡಿದೆ. ಇದೀಗ ಬಾಕಿ ಉಳಿದಿದ್ದ 3 ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ 6ಕೋಟಿ ಅನುದಾನ ನೀಡಿರುವುದರಿಂದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಇಪ್ಪತ್ತು ವರ್ಷಗಳು ಬಾಳಿಕೆ ಬರುವಂತೆ ಕಾಮಗಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಟಿಬೆಟಿಯನ್ ಹನೂರು ಪ್ರಾಂತ್ಯದ ಅಧ್ಯಕ್ಷ ಗೇಲಿಕ್ ಜೋನಿ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್ ,ಲೋಕೋಪಯೋಗಿ ಎಇಇರಾಜೇಶ್ ಮುನ್ಸಿ,ಎಇ ಚಿನ್ನಣ್ಣ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್ ‘ಮುಖಂಡರುಗಳಾದ ಪುಟ್ಟ ವೀರ ನಾಯ್ಕ, ಜಗದೀಶ್, ಸತೀಶ್ ,ಪಿಡಿಒ ರಾಜು, ಗುತ್ತಿಗೆದಾರ ಅಮೃತೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…