ಜಿಲ್ಲೆಗಳು

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಚಾಲನೆ

ಹನೂರು: ನಮ್ಮ ಕ್ಷೇತ್ರಕ್ಕೆ ಟಿಬೆಟಿಯನ್ ನಿರಾಶ್ರಿತರ ಬಂದು ನಲವತ್ತು ವರ್ಷಗಳು ಕಳೆದಿದೆ.ಇದುವರೆಗೆ ಯಾವುದೇ ವಿಚಾರಕ್ಕೂ ಒಂದು ಸಣ್ಣ ಗಲಭೆ ನಡೆಯದಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ತಾಲ್ಲೂಕಿನ ಕೊಳ್ಳೇಗಾಲ ಹಾಸನೂರು ರಸ್ತೆಯಿಂದ ಟಿಬೆಟ್ ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಟಿಬೆಟಿಯನ್ ಕಾಲೋನಿಯಲ್ಲಿನ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಸೌಹಾರ್ದಯುತವಾಗಿ ಜೀವನ ನಡೆಸುತ್ತಿದ್ದಾರೆ.ಇವರು ನಮ್ಮ ಭಾಗದ ರೈತರಿಗೆ ಮಾದರಿಯಾಗಿದ್ದಾರೆ. ಕಾಲೋನಿಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿಲೇಜ್ ಗಳಿದ್ದು .ಈ ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಸರಿಯಾದ ರಸ್ತೆಯಿರಲಿಲ್ಲ . ಈ ಹಿನ್ನೆಲೆ ಕಳೆದ 5 ತಿಂಗಳ ಹಿಂದೆ 5ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಪೂರ್ಣಗೊಂಡಿದೆ. ಇದೀಗ ಬಾಕಿ ಉಳಿದಿದ್ದ 3 ವಿಲೇಜ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ 6ಕೋಟಿ ಅನುದಾನ ನೀಡಿರುವುದರಿಂದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಇಪ್ಪತ್ತು ವರ್ಷಗಳು ಬಾಳಿಕೆ ಬರುವಂತೆ ಕಾಮಗಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಟಿಬೆಟಿಯನ್ ಹನೂರು ಪ್ರಾಂತ್ಯದ ಅಧ್ಯಕ್ಷ ಗೇಲಿಕ್ ಜೋನಿ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್ ,ಲೋಕೋಪಯೋಗಿ ಎಇಇರಾಜೇಶ್ ಮುನ್ಸಿ,ಎಇ ಚಿನ್ನಣ್ಣ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್ ‘ಮುಖಂಡರುಗಳಾದ ಪುಟ್ಟ ವೀರ ನಾಯ್ಕ, ಜಗದೀಶ್, ಸತೀಶ್ ,ಪಿಡಿಒ ರಾಜು, ಗುತ್ತಿಗೆದಾರ ಅಮೃತೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

4 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

6 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

8 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

10 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

17 mins ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

23 mins ago