ಜಿಲ್ಲೆಗಳು

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಚಾಲನೆ

ಹನೂರು: ತಾಲೂಕಿನ ನಾಗನತ್ತ ಗ್ರಾಮದ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಇಲಾಖೆಯ ಎಂ. ಡಿ. ಆರ್. ಯೋಜನೆಯಡಿ ಕಳೆದ 3 ವರ್ಷಗಳ ಹಿಂದೆಯೇ ಈ ಕಾಮಗಾರಿಯನ್ನು ಕೈಗೊಳ್ಳುವ ಸಂಬಂಧ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು. ಕಾರಣಾಂತರಗಳಿಂದ ಕಾಮಗಾರಿ ಆರಂಭಗೊಳ್ಳದೆ ಅನುದಾನ ವಾಪಸ್ ಹೋಗಿತ್ತು. ತರುವಾಯ ಈ ಬಗ್ಗೆ ಪುನಃ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ದೊರೆತು ಕಾಮಗಾರಿ ಪ್ರಾರಂಭಿಸಲಾಗುತ್ತಿದೆ. ಈ ರಸ್ತೆ ದುರಸ್ತಿ ಯಾಗಿರುವ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಕ್ರಮ ಕೈಗೊಂಡು ಕಾಮಗಾರಿ ಪ್ರಾರಂಭಿಸಲಾಗಿದೆ . ಗುತ್ತಿಗೆದಾರರು ಗ್ರಾಮಸ್ಥರ ಸಹಕಾರದೊಂದಿಗೆ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಿ ಎಂದರು.

ಈ ಸಂದರ್ಭದಲ್ಲಿ ಎಇಇ ರಾಜೇಶ್ ಮುನಸಿ,ಕಿರಿಯ ಅಭಿಯಂತರರಾದ ಚಿನ್ನಣ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಉಪಾಧ್ಯಕ್ಷ ಶಂಕ್ರಪ್ಪ,ಮುಖಂಡರಾದ ಶಂಭು,ಗುತ್ತಿಗೆದಾರ ಅಪ್ಪಾದೊರೆ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಮುಖಂಡರುಗಳು ಉಪಸ್ಥಿತರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

7 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

13 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

13 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

13 hours ago