ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.ಗ್ರಾಮದ ರವಿಕುಮಾರ್ ಮಾತನಾಡಿ ಉಪ್ಪಾರ ಸಮುದಾಯದ ಬಡಾವಣೆಯಲ್ಲಿ ಸುಮಾರು 40 ವರ್ಷ ಗಳಿಂದ ರಸ್ತೆ, ಚರಂಡಿ ಇಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ,ಯಾವುದೇ ಜನಪ್ರತಿನಿದಿನಗಳು,ಅಧಿಕಾರಿಗಳು ಹಿತ್ತಾ ಗಮನ ಹರಿಸುತ್ತಿಲ್ಲ,ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರುಕೂಡ ತಲೆಕೆಡಿಸಿ ಕೊಳ್ಳುತ್ತಿಲ್ಲ ನಮಗೆ ಸಮಸ್ಯೆ ಬಗೆಹರಿಯುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದರು.ಗ್ರಾಮದ ಮಹಿಳೆ ದುಂಡಮ್ಮ ಮಾತನಾಡಿ ನಮ್ಮ ಉಪ್ಪಾರ ಸಮುದಾಯ ಬಡಾವಣೆಯ ರಸ್ತೆ ಸುಮಾರು ವರ್ಷ ಗಳಿಂದ ಹಾಳಾಗಿದ್ದು ನಮ್ಮ ಮಕ್ಕಳು ಹಾಗೂ ವಯಸ್ಸಾದವರನ್ನ ಕರೆದುಕೊಂಡು ಹೋಗಲು ತುಂಬಾ ಕಷ್ಟ ವಾಗಿದೆ.ಅನಾರೋಗ್ಯದ ಸಂದರ್ಭದಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗಲು, ಆಂಬುಲೆನ್ಸ್ ಬರಲು ರಸ್ತೆಯಲ್ಲಿ ಆಗುವುದಿಲ್ಲ. ಆಗಾಗಿ ನಮಗೆ ತಕ್ಷಣ ರಸ್ತೆ ಮಾಡಿಸಿ ಸಾರ್ವಜನಿಕವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.ಪಿ.ಡಿ.ಓ.ನಿರಂಜನ್ ಮಾತನಾಡಿ ಈ ರಸ್ತೆಗೆ ಸ್ಥಳೀಯ ಶಾಸಕರ ಅನುದಾನದಲ್ಲಿ 20 ಲಕ್ಷ ಹಣ ಬಿಡುಗಡೆ ಆಗಿದೆ ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಸಲಾಗುವುದು,ತುರ್ತಾಗಿ ನಿಮಗೆ ರಸ್ತೆ ಮಾಡ ಬೇಕಾದರೆ ನಮ್ಮ ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಕಾಮಗಾರಿಯಲ್ಲಿ 15 ದಿನಗಳೋಳಗೆ ಕೆಲಸ ಮಾಡುತ್ತೆವೆ ಎಂದರು.ಪಿ ಡಿ ಓ ಮಾತಿಗೆ ಒಪ್ಪದ ಪ್ರತಿಭಟನೆಕರಾರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬರುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ನಮಗೆ ತಕ್ಷಣ ರಸ್ತೆ ಪ್ರಾರಂಭವಾಗಬೇಕು ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರತ್ನಮ್ಮ,ಮಾರಮ್ಮ,ಮಹಾದೇವಮ್ಮ,ಲಕ್ಷ್ಮೀಮ್ಮ,ನೀಲಮ್ಮ,ರಾಜಮ್ಮ,ನಾಗರಾಜು,ಮಾದೇಶ್,ಕರಗಯ್ಯ,ಕಾಮಶೆಟ್ಟಿ,ನಾಗಶೆಟ್ಟಿ,ಜಗ್ಗು,ಮಹಾದೇವಶೆಟ್ಟಿ,ಸಿದ್ದಶೆಟ್ಟಿ,ನಿಂಗಶೆಟ್ಟಿ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…