ಜಿಲ್ಲೆಗಳು

ರಸ್ತೆ, ಚರಂಡಿಗಾಗಿ ಹೊನ್ನೂರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ

ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.ಗ್ರಾಮದ ರವಿಕುಮಾರ್ ಮಾತನಾಡಿ ಉಪ್ಪಾರ ಸಮುದಾಯದ ಬಡಾವಣೆಯಲ್ಲಿ ಸುಮಾರು 40 ವರ್ಷ ಗಳಿಂದ ರಸ್ತೆ, ಚರಂಡಿ ಇಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ,ಯಾವುದೇ ಜನಪ್ರತಿನಿದಿನಗಳು,ಅಧಿಕಾರಿಗಳು ಹಿತ್ತಾ ಗಮನ ಹರಿಸುತ್ತಿಲ್ಲ,ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರುಕೂಡ ತಲೆಕೆಡಿಸಿ ಕೊಳ್ಳುತ್ತಿಲ್ಲ ನಮಗೆ ಸಮಸ್ಯೆ ಬಗೆಹರಿಯುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದರು.ಗ್ರಾಮದ ಮಹಿಳೆ ದುಂಡಮ್ಮ ಮಾತನಾಡಿ ನಮ್ಮ ಉಪ್ಪಾರ ಸಮುದಾಯ ಬಡಾವಣೆಯ ರಸ್ತೆ ಸುಮಾರು ವರ್ಷ ಗಳಿಂದ ಹಾಳಾಗಿದ್ದು ನಮ್ಮ ಮಕ್ಕಳು ಹಾಗೂ ವಯಸ್ಸಾದವರನ್ನ ಕರೆದುಕೊಂಡು ಹೋಗಲು ತುಂಬಾ ಕಷ್ಟ ವಾಗಿದೆ.ಅನಾರೋಗ್ಯದ ಸಂದರ್ಭದಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗಲು, ಆಂಬುಲೆನ್ಸ್ ಬರಲು ರಸ್ತೆಯಲ್ಲಿ ಆಗುವುದಿಲ್ಲ. ಆಗಾಗಿ ನಮಗೆ ತಕ್ಷಣ ರಸ್ತೆ ಮಾಡಿಸಿ ಸಾರ್ವಜನಿಕವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.ಪಿ.ಡಿ.ಓ.ನಿರಂಜನ್ ಮಾತನಾಡಿ ಈ ರಸ್ತೆಗೆ ಸ್ಥಳೀಯ ಶಾಸಕರ ಅನುದಾನದಲ್ಲಿ 20 ಲಕ್ಷ ಹಣ ಬಿಡುಗಡೆ ಆಗಿದೆ ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಸಲಾಗುವುದು,ತುರ್ತಾಗಿ ನಿಮಗೆ ರಸ್ತೆ ಮಾಡ ಬೇಕಾದರೆ ನಮ್ಮ ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಕಾಮಗಾರಿಯಲ್ಲಿ 15 ದಿನಗಳೋಳಗೆ ಕೆಲಸ ಮಾಡುತ್ತೆವೆ ಎಂದರು.ಪಿ ಡಿ ಓ ಮಾತಿಗೆ ಒಪ್ಪದ ಪ್ರತಿಭಟನೆಕರಾರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬರುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ನಮಗೆ ತಕ್ಷಣ ರಸ್ತೆ ಪ್ರಾರಂಭವಾಗಬೇಕು ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರತ್ನಮ್ಮ,ಮಾರಮ್ಮ,ಮಹಾದೇವಮ್ಮ,ಲಕ್ಷ್ಮೀಮ್ಮ,ನೀಲಮ್ಮ,ರಾಜಮ್ಮ,ನಾಗರಾಜು,ಮಾದೇಶ್,ಕರಗಯ್ಯ,ಕಾಮಶೆಟ್ಟಿ,ನಾಗಶೆಟ್ಟಿ,ಜಗ್ಗು,ಮಹಾದೇವಶೆಟ್ಟಿ,ಸಿದ್ದಶೆಟ್ಟಿ,ನಿಂಗಶೆಟ್ಟಿ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

22 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

28 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

37 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago