ಜಿಲ್ಲೆಗಳು

ರಸ್ತೆ, ಚರಂಡಿಗಾಗಿ ಹೊನ್ನೂರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ

ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.ಗ್ರಾಮದ ರವಿಕುಮಾರ್ ಮಾತನಾಡಿ ಉಪ್ಪಾರ ಸಮುದಾಯದ ಬಡಾವಣೆಯಲ್ಲಿ ಸುಮಾರು 40 ವರ್ಷ ಗಳಿಂದ ರಸ್ತೆ, ಚರಂಡಿ ಇಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ,ಯಾವುದೇ ಜನಪ್ರತಿನಿದಿನಗಳು,ಅಧಿಕಾರಿಗಳು ಹಿತ್ತಾ ಗಮನ ಹರಿಸುತ್ತಿಲ್ಲ,ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರುಕೂಡ ತಲೆಕೆಡಿಸಿ ಕೊಳ್ಳುತ್ತಿಲ್ಲ ನಮಗೆ ಸಮಸ್ಯೆ ಬಗೆಹರಿಯುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದರು.ಗ್ರಾಮದ ಮಹಿಳೆ ದುಂಡಮ್ಮ ಮಾತನಾಡಿ ನಮ್ಮ ಉಪ್ಪಾರ ಸಮುದಾಯ ಬಡಾವಣೆಯ ರಸ್ತೆ ಸುಮಾರು ವರ್ಷ ಗಳಿಂದ ಹಾಳಾಗಿದ್ದು ನಮ್ಮ ಮಕ್ಕಳು ಹಾಗೂ ವಯಸ್ಸಾದವರನ್ನ ಕರೆದುಕೊಂಡು ಹೋಗಲು ತುಂಬಾ ಕಷ್ಟ ವಾಗಿದೆ.ಅನಾರೋಗ್ಯದ ಸಂದರ್ಭದಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗಲು, ಆಂಬುಲೆನ್ಸ್ ಬರಲು ರಸ್ತೆಯಲ್ಲಿ ಆಗುವುದಿಲ್ಲ. ಆಗಾಗಿ ನಮಗೆ ತಕ್ಷಣ ರಸ್ತೆ ಮಾಡಿಸಿ ಸಾರ್ವಜನಿಕವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.ಪಿ.ಡಿ.ಓ.ನಿರಂಜನ್ ಮಾತನಾಡಿ ಈ ರಸ್ತೆಗೆ ಸ್ಥಳೀಯ ಶಾಸಕರ ಅನುದಾನದಲ್ಲಿ 20 ಲಕ್ಷ ಹಣ ಬಿಡುಗಡೆ ಆಗಿದೆ ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಸಲಾಗುವುದು,ತುರ್ತಾಗಿ ನಿಮಗೆ ರಸ್ತೆ ಮಾಡ ಬೇಕಾದರೆ ನಮ್ಮ ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಕಾಮಗಾರಿಯಲ್ಲಿ 15 ದಿನಗಳೋಳಗೆ ಕೆಲಸ ಮಾಡುತ್ತೆವೆ ಎಂದರು.ಪಿ ಡಿ ಓ ಮಾತಿಗೆ ಒಪ್ಪದ ಪ್ರತಿಭಟನೆಕರಾರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬರುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ನಮಗೆ ತಕ್ಷಣ ರಸ್ತೆ ಪ್ರಾರಂಭವಾಗಬೇಕು ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರತ್ನಮ್ಮ,ಮಾರಮ್ಮ,ಮಹಾದೇವಮ್ಮ,ಲಕ್ಷ್ಮೀಮ್ಮ,ನೀಲಮ್ಮ,ರಾಜಮ್ಮ,ನಾಗರಾಜು,ಮಾದೇಶ್,ಕರಗಯ್ಯ,ಕಾಮಶೆಟ್ಟಿ,ನಾಗಶೆಟ್ಟಿ,ಜಗ್ಗು,ಮಹಾದೇವಶೆಟ್ಟಿ,ಸಿದ್ದಶೆಟ್ಟಿ,ನಿಂಗಶೆಟ್ಟಿ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

8 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

8 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

9 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

9 hours ago