ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.ಗ್ರಾಮದ ರವಿಕುಮಾರ್ ಮಾತನಾಡಿ ಉಪ್ಪಾರ ಸಮುದಾಯದ ಬಡಾವಣೆಯಲ್ಲಿ ಸುಮಾರು 40 ವರ್ಷ ಗಳಿಂದ ರಸ್ತೆ, ಚರಂಡಿ ಇಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ,ಯಾವುದೇ ಜನಪ್ರತಿನಿದಿನಗಳು,ಅಧಿಕಾರಿಗಳು ಹಿತ್ತಾ ಗಮನ ಹರಿಸುತ್ತಿಲ್ಲ,ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರುಕೂಡ ತಲೆಕೆಡಿಸಿ ಕೊಳ್ಳುತ್ತಿಲ್ಲ ನಮಗೆ ಸಮಸ್ಯೆ ಬಗೆಹರಿಯುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದರು.ಗ್ರಾಮದ ಮಹಿಳೆ ದುಂಡಮ್ಮ ಮಾತನಾಡಿ ನಮ್ಮ ಉಪ್ಪಾರ ಸಮುದಾಯ ಬಡಾವಣೆಯ ರಸ್ತೆ ಸುಮಾರು ವರ್ಷ ಗಳಿಂದ ಹಾಳಾಗಿದ್ದು ನಮ್ಮ ಮಕ್ಕಳು ಹಾಗೂ ವಯಸ್ಸಾದವರನ್ನ ಕರೆದುಕೊಂಡು ಹೋಗಲು ತುಂಬಾ ಕಷ್ಟ ವಾಗಿದೆ.ಅನಾರೋಗ್ಯದ ಸಂದರ್ಭದಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗಲು, ಆಂಬುಲೆನ್ಸ್ ಬರಲು ರಸ್ತೆಯಲ್ಲಿ ಆಗುವುದಿಲ್ಲ. ಆಗಾಗಿ ನಮಗೆ ತಕ್ಷಣ ರಸ್ತೆ ಮಾಡಿಸಿ ಸಾರ್ವಜನಿಕವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.ಪಿ.ಡಿ.ಓ.ನಿರಂಜನ್ ಮಾತನಾಡಿ ಈ ರಸ್ತೆಗೆ ಸ್ಥಳೀಯ ಶಾಸಕರ ಅನುದಾನದಲ್ಲಿ 20 ಲಕ್ಷ ಹಣ ಬಿಡುಗಡೆ ಆಗಿದೆ ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಸಲಾಗುವುದು,ತುರ್ತಾಗಿ ನಿಮಗೆ ರಸ್ತೆ ಮಾಡ ಬೇಕಾದರೆ ನಮ್ಮ ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಕಾಮಗಾರಿಯಲ್ಲಿ 15 ದಿನಗಳೋಳಗೆ ಕೆಲಸ ಮಾಡುತ್ತೆವೆ ಎಂದರು.ಪಿ ಡಿ ಓ ಮಾತಿಗೆ ಒಪ್ಪದ ಪ್ರತಿಭಟನೆಕರಾರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬರುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ನಮಗೆ ತಕ್ಷಣ ರಸ್ತೆ ಪ್ರಾರಂಭವಾಗಬೇಕು ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರತ್ನಮ್ಮ,ಮಾರಮ್ಮ,ಮಹಾದೇವಮ್ಮ,ಲಕ್ಷ್ಮೀಮ್ಮ,ನೀಲಮ್ಮ,ರಾಜಮ್ಮ,ನಾಗರಾಜು,ಮಾದೇಶ್,ಕರಗಯ್ಯ,ಕಾಮಶೆಟ್ಟಿ,ನಾಗಶೆಟ್ಟಿ,ಜಗ್ಗು,ಮಹಾದೇವಶೆಟ್ಟಿ,ಸಿದ್ದಶೆಟ್ಟಿ,ನಿಂಗಶೆಟ್ಟಿ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…