ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.ಗ್ರಾಮದ ರವಿಕುಮಾರ್ ಮಾತನಾಡಿ ಉಪ್ಪಾರ ಸಮುದಾಯದ ಬಡಾವಣೆಯಲ್ಲಿ ಸುಮಾರು 40 ವರ್ಷ ಗಳಿಂದ ರಸ್ತೆ, ಚರಂಡಿ ಇಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ,ಯಾವುದೇ ಜನಪ್ರತಿನಿದಿನಗಳು,ಅಧಿಕಾರಿಗಳು ಹಿತ್ತಾ ಗಮನ ಹರಿಸುತ್ತಿಲ್ಲ,ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರುಕೂಡ ತಲೆಕೆಡಿಸಿ ಕೊಳ್ಳುತ್ತಿಲ್ಲ ನಮಗೆ ಸಮಸ್ಯೆ ಬಗೆಹರಿಯುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದರು.ಗ್ರಾಮದ ಮಹಿಳೆ ದುಂಡಮ್ಮ ಮಾತನಾಡಿ ನಮ್ಮ ಉಪ್ಪಾರ ಸಮುದಾಯ ಬಡಾವಣೆಯ ರಸ್ತೆ ಸುಮಾರು ವರ್ಷ ಗಳಿಂದ ಹಾಳಾಗಿದ್ದು ನಮ್ಮ ಮಕ್ಕಳು ಹಾಗೂ ವಯಸ್ಸಾದವರನ್ನ ಕರೆದುಕೊಂಡು ಹೋಗಲು ತುಂಬಾ ಕಷ್ಟ ವಾಗಿದೆ.ಅನಾರೋಗ್ಯದ ಸಂದರ್ಭದಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗಲು, ಆಂಬುಲೆನ್ಸ್ ಬರಲು ರಸ್ತೆಯಲ್ಲಿ ಆಗುವುದಿಲ್ಲ. ಆಗಾಗಿ ನಮಗೆ ತಕ್ಷಣ ರಸ್ತೆ ಮಾಡಿಸಿ ಸಾರ್ವಜನಿಕವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.ಪಿ.ಡಿ.ಓ.ನಿರಂಜನ್ ಮಾತನಾಡಿ ಈ ರಸ್ತೆಗೆ ಸ್ಥಳೀಯ ಶಾಸಕರ ಅನುದಾನದಲ್ಲಿ 20 ಲಕ್ಷ ಹಣ ಬಿಡುಗಡೆ ಆಗಿದೆ ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಸಲಾಗುವುದು,ತುರ್ತಾಗಿ ನಿಮಗೆ ರಸ್ತೆ ಮಾಡ ಬೇಕಾದರೆ ನಮ್ಮ ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಕಾಮಗಾರಿಯಲ್ಲಿ 15 ದಿನಗಳೋಳಗೆ ಕೆಲಸ ಮಾಡುತ್ತೆವೆ ಎಂದರು.ಪಿ ಡಿ ಓ ಮಾತಿಗೆ ಒಪ್ಪದ ಪ್ರತಿಭಟನೆಕರಾರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬರುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ನಮಗೆ ತಕ್ಷಣ ರಸ್ತೆ ಪ್ರಾರಂಭವಾಗಬೇಕು ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರತ್ನಮ್ಮ,ಮಾರಮ್ಮ,ಮಹಾದೇವಮ್ಮ,ಲಕ್ಷ್ಮೀಮ್ಮ,ನೀಲಮ್ಮ,ರಾಜಮ್ಮ,ನಾಗರಾಜು,ಮಾದೇಶ್,ಕರಗಯ್ಯ,ಕಾಮಶೆಟ್ಟಿ,ನಾಗಶೆಟ್ಟಿ,ಜಗ್ಗು,ಮಹಾದೇವಶೆಟ್ಟಿ,ಸಿದ್ದಶೆಟ್ಟಿ,ನಿಂಗಶೆಟ್ಟಿ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…