ಜಿಲ್ಲೆಗಳು

ರಸ್ತೆ, ಚರಂಡಿಗಾಗಿ ಹೊನ್ನೂರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ

ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.ಗ್ರಾಮದ ರವಿಕುಮಾರ್ ಮಾತನಾಡಿ ಉಪ್ಪಾರ ಸಮುದಾಯದ ಬಡಾವಣೆಯಲ್ಲಿ ಸುಮಾರು 40 ವರ್ಷ ಗಳಿಂದ ರಸ್ತೆ, ಚರಂಡಿ ಇಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ,ಯಾವುದೇ ಜನಪ್ರತಿನಿದಿನಗಳು,ಅಧಿಕಾರಿಗಳು ಹಿತ್ತಾ ಗಮನ ಹರಿಸುತ್ತಿಲ್ಲ,ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರುಕೂಡ ತಲೆಕೆಡಿಸಿ ಕೊಳ್ಳುತ್ತಿಲ್ಲ ನಮಗೆ ಸಮಸ್ಯೆ ಬಗೆಹರಿಯುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದರು.ಗ್ರಾಮದ ಮಹಿಳೆ ದುಂಡಮ್ಮ ಮಾತನಾಡಿ ನಮ್ಮ ಉಪ್ಪಾರ ಸಮುದಾಯ ಬಡಾವಣೆಯ ರಸ್ತೆ ಸುಮಾರು ವರ್ಷ ಗಳಿಂದ ಹಾಳಾಗಿದ್ದು ನಮ್ಮ ಮಕ್ಕಳು ಹಾಗೂ ವಯಸ್ಸಾದವರನ್ನ ಕರೆದುಕೊಂಡು ಹೋಗಲು ತುಂಬಾ ಕಷ್ಟ ವಾಗಿದೆ.ಅನಾರೋಗ್ಯದ ಸಂದರ್ಭದಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗಲು, ಆಂಬುಲೆನ್ಸ್ ಬರಲು ರಸ್ತೆಯಲ್ಲಿ ಆಗುವುದಿಲ್ಲ. ಆಗಾಗಿ ನಮಗೆ ತಕ್ಷಣ ರಸ್ತೆ ಮಾಡಿಸಿ ಸಾರ್ವಜನಿಕವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.ಪಿ.ಡಿ.ಓ.ನಿರಂಜನ್ ಮಾತನಾಡಿ ಈ ರಸ್ತೆಗೆ ಸ್ಥಳೀಯ ಶಾಸಕರ ಅನುದಾನದಲ್ಲಿ 20 ಲಕ್ಷ ಹಣ ಬಿಡುಗಡೆ ಆಗಿದೆ ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಸಲಾಗುವುದು,ತುರ್ತಾಗಿ ನಿಮಗೆ ರಸ್ತೆ ಮಾಡ ಬೇಕಾದರೆ ನಮ್ಮ ಗ್ರಾಮ ಪಂಚಾಯತಿ ವತಿಯಿಂದ ನರೇಗಾ ಕಾಮಗಾರಿಯಲ್ಲಿ 15 ದಿನಗಳೋಳಗೆ ಕೆಲಸ ಮಾಡುತ್ತೆವೆ ಎಂದರು.ಪಿ ಡಿ ಓ ಮಾತಿಗೆ ಒಪ್ಪದ ಪ್ರತಿಭಟನೆಕರಾರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬರುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ನಮಗೆ ತಕ್ಷಣ ರಸ್ತೆ ಪ್ರಾರಂಭವಾಗಬೇಕು ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರತ್ನಮ್ಮ,ಮಾರಮ್ಮ,ಮಹಾದೇವಮ್ಮ,ಲಕ್ಷ್ಮೀಮ್ಮ,ನೀಲಮ್ಮ,ರಾಜಮ್ಮ,ನಾಗರಾಜು,ಮಾದೇಶ್,ಕರಗಯ್ಯ,ಕಾಮಶೆಟ್ಟಿ,ನಾಗಶೆಟ್ಟಿ,ಜಗ್ಗು,ಮಹಾದೇವಶೆಟ್ಟಿ,ಸಿದ್ದಶೆಟ್ಟಿ,ನಿಂಗಶೆಟ್ಟಿ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

10 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

10 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

11 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

11 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

12 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

12 hours ago