ಜಿಲ್ಲೆಗಳು

ರಸ್ತೆ ಒತ್ತುವರಿ; ಶಾಲೆಗೆ ತೆರಳಲು ಕಿರಿಕಿರಿ

ಶೂ, ಚಪ್ಪಲಿ ಕೈಯಲ್ಲಿ ಹಿಡಿದು ಹಳ್ಳಕೊಳ್ಳ ದಾಟಿ ಶಾಲೆಗೆ ಹೋಗುವ ವಿದ್ಯಾರ್ಥಿಗಳು; ೨೦ ವರ್ಷಗಳಿಂದಲೂ ಇದೇ ಸಮಸ್ಯೆ

ವರದಿ: ಮೋಹನ್ ಕುಮಾರ್ ಬಿ.ಟಿ.

ಮಂಡ್ಯ: ಪ್ರಭಾವಿಯೊಬ್ಬರು ರಸ್ತೆಯನ್ನು ಅತಿಕ್ರಮಿಸಿಕೊಂಡು ಜಮೀನು ಮಾಡುತ್ತಿರುವುದರಿಂದ ವಿದ್ಯಾರ್ಥಿಗಳು ಹಳ್ಳ-ಕೊಳ್ಳಗಳನ್ನು ದಾಟಿ ಶಾಲೆಗೆ ಹೋಗುವ ಪರಿಸ್ಥಿತಿ ತಾಲ್ಲೂಕಿನ ನೊದೆಕೊಪ್ಪಲು ಗ್ರಾಮದಲ್ಲಿ ನಿರ್ಮಾಣವಾಗಿದೆ.

ನೊದೆಕೊಪ್ಪಲು ಗ್ರಾಮದ ಸರ್ಕಾರಿ ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ಗದ್ದೆ ಬಯಲು, ಹಳ್ಳಕೊಳ್ಳಗಳೇ ದಾರಿಯಾಗಿವೆ. ವಿದ್ಯಾರ್ಥಿಗಳು ಶೂ ಮತ್ತು ಚಪ್ಪಲಿಗಳನ್ನು ಬರಿಗೈಯಲ್ಲಿಯೇ ಹಿಡಿದುಕೊಂಡು ಹೋಗುತ್ತಿದ್ದು, ಒತ್ತುವರಿ ಮಾಕೊಂಡಿರುವ ರಸ್ತೆಯನ್ನು ತೆರವು ಮಾಡಲು ಒತ್ತುವರಿದಾರರು ಒಪ್ಪುತ್ತಿಲ್ಲ.
ಗ್ರಾಮದ ಸ.ನಂ.೬ ಮತ್ತು ೭ರ ನಡುವೆ ಇರುವ ಸುಮಾರು ೧೧೦ ಮೀಟರ್ ಉದ್ದ ಹಾಗೂ ೮೨ ಅಡಿ ಅಗಲದ ರಸ್ತೆಯನ್ನು ಶಿವಶಂಕರ್ ಎಂಬವರು ತಮ್ಮ ಜಮೀನಿನ ನಡುವೆ ಸಂಪೂರ್ಣವಾಗಿ ಸೇರಿಸಿಕೊಂಡು ವಿನಾಕಾರಣ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟು ಮಾಡುತ್ತಿದ್ದಾರೆ. ಒತ್ತುವರಿ ರಸ್ತೆಯನ್ನು ಸಂಪೂರ್ಣವಾಗಿ ಬಿಡಿಸಿಕೊಟ್ಟು ಶಾಲೆಗೆ ಅನುಕೂಲ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ರಸ್ತೆ ಇಲ್ಲದೇ ಅಂಗನವಾಡಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುಮಾರು ೬೦ಕ್ಕೂ ಹೆಚ್ಚು ಮಕ್ಕಳಿಗೆ ಅನಾನುಕೂಲವಾಗಿದೆ. ಕಳೆದ ೨೦ ವರ್ಷಗಳಿಂದಲೂ ಇದೇ ಸಮಸ್ಯೆಗಳಿದ್ದು, ಗ್ರಾಮದ ಮುಖಂಡರು ಒತ್ತುವರಿಯಾಗಿರುವ ರಸ್ತೆ ಕೇಳುವುದಕ್ಕೂ ಭುಂಪಡುವ ಸ್ಥಿತಿ ಉಂಟಾಗಿದೆ. ಈಗಾಗಲೇ ತಹಸಿಲ್ದಾರ್ ಅವರ ಗಮನಕ್ಕೆ ತರಲಾಗಿದೆ. ಅವರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒತ್ತುವರಿ ತೆರವು ಮಾಡಿಕೊಡುವ ಭರವಸೆ ನೀಡಿದ್ದಾರೆ ಅಷ್ಟೇ, ಅದು ಇನ್ನೂ ಕಾರ್ಯಗತವಾಗಿಲ್ಲ.

‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದಲ್ಲಿಯೂ ಗ್ರಾಮಸ್ಥರು ಈ ಸಮಸ್ಯೆ ಪರಿಹರಿಸಿಕೊಡಲು ಅರ್ಜಿ ಸಲ್ಲಿಸಿದ್ದಾರೆ. ತಾಲ್ಲೂಕು ಸರ್ವೇಯರ್ ಕೂಡ ಅಳತೆ ಮಾಡಲು ಬಂದಾಗ ಶಿವಶಂಕರ್ ಅವರು ಜಗಳ ವಾಡಿ ಕಳುಹಿಸಿದ ಘಟನೆಯೂ ನಡೆದಿದೆ. ಹಲವು ರಾಜಿ ಸಂಧಾನಗಳನ್ನು ಮಾಡಿದರೂ ಯಾವುದೇ ದಾಖಲೆುಂನ್ನು ಇಟ್ಟುಕೊಳ್ಳದೇ ಪ್ರಭಾವಿಗಳ ಬೆಂಬಲದಿಂದ ಗ್ರಾಮದ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆ ಕೊಡುತ್ತಿದ್ದಾರೆ.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡು ಜಮೀನುಗಳನ್ನು ಮಾಡುತ್ತಿರುವುದು ಒಂದೆಡೆಯಾದರೆ, ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಓಡಾಡಲೆಂದು ರಸ್ತೆ ಬಿಟ್ಟಿದ್ದರೆ ಆ ರಸ್ತೆುಂನ್ನೇ ನುಂಗುವ ಕಳ್ಳರಿದ್ದಾರೆ ಎನ್ನುವುದು ಇಂದು ಜಗಜ್ಜಾಹಿರವಾಗಿದೆ. ಸಂಬಂಧಿಸಿದ ತಹಸಿಲ್ದಾರ್ ಹಾಗೂ ಜಿಲ್ಲಾಧಿಕಾರಿಗಳು ಒತ್ತುವರಿಯಾಗಿರುವ ಕೆರೆಗಳು ಹಾಗೂ ರಸ್ತೆಗಳನ್ನು ವಶಕ್ಕೆ ಪಡೆದು ಗ್ರಾಮಸ್ಥರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂಬುದು ಪತ್ರಿಕೆಯ ಆಶಯವಾಗಿದೆ.

ಸುವಾರು ೨೦ ವರ್ಷಗಳಿಂದಲೂ ರಸ್ತೆಯನ್ನು ಅತಿಕ್ರಮಿಸಿಕೊಂಡು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಅನಾನುಕೂಲ ವಾಡಿದ್ದು, ತಕ್ಷಣವೇ ರಸ್ತೆಯ ಒತ್ತುವರಿ ತೆರವು ಮಾಡದಿದ್ದರೆ ಗ್ರಾಮಸ್ಥರು ಒಟ್ಟುಗೂಡಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು. -ಎಂ.ಎನ್.ಬಲರಾಮು, ಗ್ರಾಪಂ ಸದಸ್ಯ.

ನೊದೆಕೊಪ್ಪಲು ಗ್ರಾಮದ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಒತ್ತುವರಿ ರಸ್ತೆ ಬಿಡಿಸಿಕೊಡುವ ಉದ್ದೇಶದಿಂದ ಗ್ರಾಮಸ್ಥರು ಮನವಿ ಮಾಡಿದ್ದಾರೆ. ರೈತರು ಹಿಡುವಳಿ ಮಾಡುತ್ತಿರುವ ಜಮೀನಿನಲ್ಲಿ ಏಕಾಏಕಿ ಹೋಗಿ ತೆರವು ಕಾರ್ಯಾಚರಣೆ ಮಾಡಿಸಲು ದಾಖಲಾತಿಗಳು ಬೇಕಿದೆ. ಅದರಂತೆ ಸರ್ವೇಯರ್‌ ಗಳಿಗೂ ತಿಳಿಸಿದ್ದೇನೆ, ದಾಖಲಾತಿ ಸಮೇತ ರಸ್ತೆ ನಕ್ಷೆ ತೆಗೆದುಕೊಂಡು ಹೋಗಿ ತೆರವು ಮಾಡಿಸುತ್ತೇನೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಸಿಕೊಡುತ್ತೇನೆ. -ಕುಂ.ಞ.ಅಹಮದ್, ತಹಸಿಲ್ದಾರ್.

 

andolana

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

4 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

10 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

11 hours ago