ವರದಿ: ಮೋಹನ್ ಕುಮಾರ್ ಬಿ.ಟಿ.
ಮಂಡ್ಯ: ಪ್ರಭಾವಿಯೊಬ್ಬರು ರಸ್ತೆಯನ್ನು ಅತಿಕ್ರಮಿಸಿಕೊಂಡು ಜಮೀನು ಮಾಡುತ್ತಿರುವುದರಿಂದ ವಿದ್ಯಾರ್ಥಿಗಳು ಹಳ್ಳ-ಕೊಳ್ಳಗಳನ್ನು ದಾಟಿ ಶಾಲೆಗೆ ಹೋಗುವ ಪರಿಸ್ಥಿತಿ ತಾಲ್ಲೂಕಿನ ನೊದೆಕೊಪ್ಪಲು ಗ್ರಾಮದಲ್ಲಿ ನಿರ್ಮಾಣವಾಗಿದೆ.
ನೊದೆಕೊಪ್ಪಲು ಗ್ರಾಮದ ಸರ್ಕಾರಿ ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ಗದ್ದೆ ಬಯಲು, ಹಳ್ಳಕೊಳ್ಳಗಳೇ ದಾರಿಯಾಗಿವೆ. ವಿದ್ಯಾರ್ಥಿಗಳು ಶೂ ಮತ್ತು ಚಪ್ಪಲಿಗಳನ್ನು ಬರಿಗೈಯಲ್ಲಿಯೇ ಹಿಡಿದುಕೊಂಡು ಹೋಗುತ್ತಿದ್ದು, ಒತ್ತುವರಿ ಮಾಕೊಂಡಿರುವ ರಸ್ತೆಯನ್ನು ತೆರವು ಮಾಡಲು ಒತ್ತುವರಿದಾರರು ಒಪ್ಪುತ್ತಿಲ್ಲ.
ಗ್ರಾಮದ ಸ.ನಂ.೬ ಮತ್ತು ೭ರ ನಡುವೆ ಇರುವ ಸುಮಾರು ೧೧೦ ಮೀಟರ್ ಉದ್ದ ಹಾಗೂ ೮೨ ಅಡಿ ಅಗಲದ ರಸ್ತೆಯನ್ನು ಶಿವಶಂಕರ್ ಎಂಬವರು ತಮ್ಮ ಜಮೀನಿನ ನಡುವೆ ಸಂಪೂರ್ಣವಾಗಿ ಸೇರಿಸಿಕೊಂಡು ವಿನಾಕಾರಣ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟು ಮಾಡುತ್ತಿದ್ದಾರೆ. ಒತ್ತುವರಿ ರಸ್ತೆಯನ್ನು ಸಂಪೂರ್ಣವಾಗಿ ಬಿಡಿಸಿಕೊಟ್ಟು ಶಾಲೆಗೆ ಅನುಕೂಲ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.
‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದಲ್ಲಿಯೂ ಗ್ರಾಮಸ್ಥರು ಈ ಸಮಸ್ಯೆ ಪರಿಹರಿಸಿಕೊಡಲು ಅರ್ಜಿ ಸಲ್ಲಿಸಿದ್ದಾರೆ. ತಾಲ್ಲೂಕು ಸರ್ವೇಯರ್ ಕೂಡ ಅಳತೆ ಮಾಡಲು ಬಂದಾಗ ಶಿವಶಂಕರ್ ಅವರು ಜಗಳ ವಾಡಿ ಕಳುಹಿಸಿದ ಘಟನೆಯೂ ನಡೆದಿದೆ. ಹಲವು ರಾಜಿ ಸಂಧಾನಗಳನ್ನು ಮಾಡಿದರೂ ಯಾವುದೇ ದಾಖಲೆುಂನ್ನು ಇಟ್ಟುಕೊಳ್ಳದೇ ಪ್ರಭಾವಿಗಳ ಬೆಂಬಲದಿಂದ ಗ್ರಾಮದ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆ ಕೊಡುತ್ತಿದ್ದಾರೆ.
ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡು ಜಮೀನುಗಳನ್ನು ಮಾಡುತ್ತಿರುವುದು ಒಂದೆಡೆಯಾದರೆ, ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಓಡಾಡಲೆಂದು ರಸ್ತೆ ಬಿಟ್ಟಿದ್ದರೆ ಆ ರಸ್ತೆುಂನ್ನೇ ನುಂಗುವ ಕಳ್ಳರಿದ್ದಾರೆ ಎನ್ನುವುದು ಇಂದು ಜಗಜ್ಜಾಹಿರವಾಗಿದೆ. ಸಂಬಂಧಿಸಿದ ತಹಸಿಲ್ದಾರ್ ಹಾಗೂ ಜಿಲ್ಲಾಧಿಕಾರಿಗಳು ಒತ್ತುವರಿಯಾಗಿರುವ ಕೆರೆಗಳು ಹಾಗೂ ರಸ್ತೆಗಳನ್ನು ವಶಕ್ಕೆ ಪಡೆದು ಗ್ರಾಮಸ್ಥರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂಬುದು ಪತ್ರಿಕೆಯ ಆಶಯವಾಗಿದೆ.
ಸುವಾರು ೨೦ ವರ್ಷಗಳಿಂದಲೂ ರಸ್ತೆಯನ್ನು ಅತಿಕ್ರಮಿಸಿಕೊಂಡು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಅನಾನುಕೂಲ ವಾಡಿದ್ದು, ತಕ್ಷಣವೇ ರಸ್ತೆಯ ಒತ್ತುವರಿ ತೆರವು ಮಾಡದಿದ್ದರೆ ಗ್ರಾಮಸ್ಥರು ಒಟ್ಟುಗೂಡಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು. -ಎಂ.ಎನ್.ಬಲರಾಮು, ಗ್ರಾಪಂ ಸದಸ್ಯ.
ನೊದೆಕೊಪ್ಪಲು ಗ್ರಾಮದ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಒತ್ತುವರಿ ರಸ್ತೆ ಬಿಡಿಸಿಕೊಡುವ ಉದ್ದೇಶದಿಂದ ಗ್ರಾಮಸ್ಥರು ಮನವಿ ಮಾಡಿದ್ದಾರೆ. ರೈತರು ಹಿಡುವಳಿ ಮಾಡುತ್ತಿರುವ ಜಮೀನಿನಲ್ಲಿ ಏಕಾಏಕಿ ಹೋಗಿ ತೆರವು ಕಾರ್ಯಾಚರಣೆ ಮಾಡಿಸಲು ದಾಖಲಾತಿಗಳು ಬೇಕಿದೆ. ಅದರಂತೆ ಸರ್ವೇಯರ್ ಗಳಿಗೂ ತಿಳಿಸಿದ್ದೇನೆ, ದಾಖಲಾತಿ ಸಮೇತ ರಸ್ತೆ ನಕ್ಷೆ ತೆಗೆದುಕೊಂಡು ಹೋಗಿ ತೆರವು ಮಾಡಿಸುತ್ತೇನೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಸಿಕೊಡುತ್ತೇನೆ. -ಕುಂ.ಞ.ಅಹಮದ್, ತಹಸಿಲ್ದಾರ್.
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…