ಹನೂರು: ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟಣದ ರಸ್ತೆ ಅಗಲೀಕರಣ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರ ಸೂಚನೆ ಮೇರೆಗೆ ಶನಿವಾರ ಕೊಳ್ಳೆಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ್ ನೇತೃತ್ವದಲ್ಲಿ ಚುರುಕುಗೊಂಡಿದೆ.
ಕೊಳ್ಳೇಗಾಲದಿಂದ ಹನೂರು ಪಟ್ಟಣದ ವರೆಗೆ 23ಕಿ ಮೀ ರಸ್ತೆಯನ್ನು 108ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿರವರು ಕಾಮಗಾರಿಗೆ ಚಾಲನೆ ನೀಡಿದ್ದರು. ಚಾಲನೆ ನೀಡಿ 5ವರ್ಷಗಳೇ ಕಳೆದಿದ್ದರೂ ಸಹ ಕಾಮಗಾರಿ ಪೂರ್ಣಗೊಂಡಿರಲಿಲ್ಲ ಇದು ಸಾರ್ವಜನಿಕ ವಲಯದಲ್ಲಿ ತೀವ್ರ ವ್ಯಾಪಕ ಟೀಕೆಗೆ ಗುರಿಯಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವರ ಒತ್ತು: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ ಸೋಮಣ್ಣ ನೇಮಕಗೊಂಡ ನಂತರ ಕೊಳ್ಳೇಗಾಲದಿಂದ ಹನೂರು ಪಟ್ಟಣದ ವರೆಗಿನ ರಸ್ತೆ ಅಭಿವೃದ್ಧಿ ಬಗ್ಗೆ ಸಂಬಂಧಪಟ್ಟ ಕೆಶಿಪ್ ಅಧಿಕಾರಿಗಳ ಜೊತೆ ಹತ್ತಾರು ಸಭೆ ನಡೆಸಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ರಸ್ತೆ ಅಭಿವೃದ್ಧಿ ಕಾಮಗಾರಿ ಚುರುಕುಗೊಂಡಿದೆ .
ಇದಲ್ಲದೆ ಕಳೆದ 3ದಿನಗಳ ಹಿಂದೆ ಅಪಾರ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಮಾಲೀಕರುಗಳ ಜತೆ ಸಭೆ ನಡೆಸಿ ಮಳಿಗೆಗಳನ್ನು ತೆರವು ಗೊಳಿಸುವಂತೆ ಸೂಚಿಸಿದ್ದರು. ಇಷ್ಟಾದರೂ ಸಹ ಮಳಿಗೆದಾರರು ಕ್ಯಾರೆ ಎಂದಿಲ್ಲ ಶನಿವಾರ ಉಪವಿಭಾಗಾಧಿಕಾರಿ ಗೀತಾ ಹಾಗೂ ಕೆಶಿಪ್ ಅಧಿಕಾರಿಗಳ ನೇತೃತ್ವದ ತಂಡ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಟ್ಟಣ ಪಂಚಾಯಿತಿಗೆ ಸೇರಿದ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ.
ಮಳಿಗೆ ಪಡೆದವರ ಅಳಲು : ಪಟ್ಟಣ ಪಂಚಾಯಿತಿಗೆ ಸೇರಿದ ವಾಣಿಜ್ಯ ಮಳಿಗೆಯನ್ನು ನಾವು ಇಪ್ಪತ್ತೈದು ವರ್ಷಕ್ಕೆ ಗುತ್ತಿಗೆ ಪಡೆದಿದ್ದವು ಆದರೆ ಇನ್ನೂ ಕಾಲಾವಕಾಶ ಇರುವಾಗಲೇ ಅಧಿಕಾರಿಗಳು ಖಾಲಿ ಮಾಡುವಂತೆ ತಿಳಿಸಿದ್ದಾರೆ ನಮಗೆ ಬಾಕಿ ಬರಬೇಕಾಗಿರುವ ಹಣವನ್ನು ಪಾವತಿಸಿ ನಂತರ ತೆರವುಗೊಳಿಸುವಂತೆ ಮಳಿಗೆ ಪಡೆದವರುಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.





