ಜಿಲ್ಲೆಗಳು

ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ : ವಾಹನ ಸವಾರರ ಪರದಾಟ

ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು.

ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದ ಪರಿಣಾಮ ದ್ವಿಚಕ್ರ ವಾಹನಗಳು ಸೇರಿದಂತೆ ಬಸ್, ಟೆಂಪೋ,ತರಕಾರಿ ವಾಹನಗಳು ತೆರಳಲು ಸಾಧ್ಯವಾಗದೆ ರಸ್ತೆಯಲ್ಲೇ ಕಾಲ ಕಳೆಯುವಂತಾಗಿತ್ತು.

ಮರವು ರಸ್ತೆಗೆ ಸುಮಾರು 4 ಗಂಟೆ ಸಮಯದಲ್ಲಿ ಬಿದ್ದಿದೆ. ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಒಂದೂವರೆ ಗಂಟೆ ತಡವಾಗಿ ಆಗಮಿಸಿದ್ದಾರೆ. ನಂತರ ಸ್ಥಳೀಯರ ನೆರವಿನಿಂದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಒಣ ಮರ ತೆರವುಗೊಳಿಸುವಂತೆ ಆಗ್ರಹ : ಹನೂರು ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗಮಧ್ಯದಲ್ಲೇ ಇಪ್ಪತ್ತಕ್ಕೂ ಹೆಚ್ಚು ಮರಗಳು ಒಣಗಿ ನಿಂತಿದೆ.ಇದಲ್ಲದೆ ಮಸ್ಕತಿ ಹಳ್ಳದ ಸಮೀಪವು 1ಬೃಹತ್ ಗಾತ್ರದ ಮರ ಒಣಗಿ ನಿಂತಿರುವುದರಿಂದ ಯಾವ ಸಮಯದಲ್ಲಾದರೂ ಮರ ಬೀಳಬಹುದು. ಅನಾಹುತ ಅವಘಡಗಳು ಸಂಭವಿಸುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಒಣ ಮರ ತೆರವುಗೊಳಿಸುವಂತೆ ಪರಿವರ್ತನಾ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ .

andolanait

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

3 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

3 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

6 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

6 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago