ಜಿಲ್ಲೆಗಳು

ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ : ವಾಹನ ಸವಾರರ ಪರದಾಟ

ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು.

ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದ ಪರಿಣಾಮ ದ್ವಿಚಕ್ರ ವಾಹನಗಳು ಸೇರಿದಂತೆ ಬಸ್, ಟೆಂಪೋ,ತರಕಾರಿ ವಾಹನಗಳು ತೆರಳಲು ಸಾಧ್ಯವಾಗದೆ ರಸ್ತೆಯಲ್ಲೇ ಕಾಲ ಕಳೆಯುವಂತಾಗಿತ್ತು.

ಮರವು ರಸ್ತೆಗೆ ಸುಮಾರು 4 ಗಂಟೆ ಸಮಯದಲ್ಲಿ ಬಿದ್ದಿದೆ. ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಒಂದೂವರೆ ಗಂಟೆ ತಡವಾಗಿ ಆಗಮಿಸಿದ್ದಾರೆ. ನಂತರ ಸ್ಥಳೀಯರ ನೆರವಿನಿಂದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಒಣ ಮರ ತೆರವುಗೊಳಿಸುವಂತೆ ಆಗ್ರಹ : ಹನೂರು ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗಮಧ್ಯದಲ್ಲೇ ಇಪ್ಪತ್ತಕ್ಕೂ ಹೆಚ್ಚು ಮರಗಳು ಒಣಗಿ ನಿಂತಿದೆ.ಇದಲ್ಲದೆ ಮಸ್ಕತಿ ಹಳ್ಳದ ಸಮೀಪವು 1ಬೃಹತ್ ಗಾತ್ರದ ಮರ ಒಣಗಿ ನಿಂತಿರುವುದರಿಂದ ಯಾವ ಸಮಯದಲ್ಲಾದರೂ ಮರ ಬೀಳಬಹುದು. ಅನಾಹುತ ಅವಘಡಗಳು ಸಂಭವಿಸುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಒಣ ಮರ ತೆರವುಗೊಳಿಸುವಂತೆ ಪರಿವರ್ತನಾ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ .

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

3 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

31 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago