ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು.
ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದ ಪರಿಣಾಮ ದ್ವಿಚಕ್ರ ವಾಹನಗಳು ಸೇರಿದಂತೆ ಬಸ್, ಟೆಂಪೋ,ತರಕಾರಿ ವಾಹನಗಳು ತೆರಳಲು ಸಾಧ್ಯವಾಗದೆ ರಸ್ತೆಯಲ್ಲೇ ಕಾಲ ಕಳೆಯುವಂತಾಗಿತ್ತು.
ಮರವು ರಸ್ತೆಗೆ ಸುಮಾರು 4 ಗಂಟೆ ಸಮಯದಲ್ಲಿ ಬಿದ್ದಿದೆ. ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಒಂದೂವರೆ ಗಂಟೆ ತಡವಾಗಿ ಆಗಮಿಸಿದ್ದಾರೆ. ನಂತರ ಸ್ಥಳೀಯರ ನೆರವಿನಿಂದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಒಣ ಮರ ತೆರವುಗೊಳಿಸುವಂತೆ ಆಗ್ರಹ : ಹನೂರು ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗಮಧ್ಯದಲ್ಲೇ ಇಪ್ಪತ್ತಕ್ಕೂ ಹೆಚ್ಚು ಮರಗಳು ಒಣಗಿ ನಿಂತಿದೆ.ಇದಲ್ಲದೆ ಮಸ್ಕತಿ ಹಳ್ಳದ ಸಮೀಪವು 1ಬೃಹತ್ ಗಾತ್ರದ ಮರ ಒಣಗಿ ನಿಂತಿರುವುದರಿಂದ ಯಾವ ಸಮಯದಲ್ಲಾದರೂ ಮರ ಬೀಳಬಹುದು. ಅನಾಹುತ ಅವಘಡಗಳು ಸಂಭವಿಸುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಒಣ ಮರ ತೆರವುಗೊಳಿಸುವಂತೆ ಪರಿವರ್ತನಾ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ .
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…