ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು.
ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದ ಪರಿಣಾಮ ದ್ವಿಚಕ್ರ ವಾಹನಗಳು ಸೇರಿದಂತೆ ಬಸ್, ಟೆಂಪೋ,ತರಕಾರಿ ವಾಹನಗಳು ತೆರಳಲು ಸಾಧ್ಯವಾಗದೆ ರಸ್ತೆಯಲ್ಲೇ ಕಾಲ ಕಳೆಯುವಂತಾಗಿತ್ತು.
ಮರವು ರಸ್ತೆಗೆ ಸುಮಾರು 4 ಗಂಟೆ ಸಮಯದಲ್ಲಿ ಬಿದ್ದಿದೆ. ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಒಂದೂವರೆ ಗಂಟೆ ತಡವಾಗಿ ಆಗಮಿಸಿದ್ದಾರೆ. ನಂತರ ಸ್ಥಳೀಯರ ನೆರವಿನಿಂದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಒಣ ಮರ ತೆರವುಗೊಳಿಸುವಂತೆ ಆಗ್ರಹ : ಹನೂರು ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗಮಧ್ಯದಲ್ಲೇ ಇಪ್ಪತ್ತಕ್ಕೂ ಹೆಚ್ಚು ಮರಗಳು ಒಣಗಿ ನಿಂತಿದೆ.ಇದಲ್ಲದೆ ಮಸ್ಕತಿ ಹಳ್ಳದ ಸಮೀಪವು 1ಬೃಹತ್ ಗಾತ್ರದ ಮರ ಒಣಗಿ ನಿಂತಿರುವುದರಿಂದ ಯಾವ ಸಮಯದಲ್ಲಾದರೂ ಮರ ಬೀಳಬಹುದು. ಅನಾಹುತ ಅವಘಡಗಳು ಸಂಭವಿಸುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಒಣ ಮರ ತೆರವುಗೊಳಿಸುವಂತೆ ಪರಿವರ್ತನಾ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ .
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…