ಮೈಸೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಮಾಡುವ ವಿಚಾರ ಸದ್ಯ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿಕೆ ನೀಡಿದ್ದು ಸದ್ಯ ಇದರ ವಿರುದ್ಧ ಪರಿಸರ ಪ್ರೇಮಿಗಳು ಕಿಡಿಕಾರಿದ್ದಾರೆ.
ಈ ಸಂಬಂಧ ಇದೀಗ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಸಹ ಮಾತನಾಡಿದ್ದು, ಇದಕ್ಕೆ ತಮ್ಮ ವಿರೋಧವಿದೆ ಎಂಬುದನ್ನು ವ್ಯಕ್ತಪಡಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಮಾಡುವ ಅಗತ್ಯವಿಲ್ಲ, ನಂದಿ ಬೆಟ್ಟಕ್ಕೆ ಬೇಕಾದರೆ ರೋಪ್ವೇ ಮಾಡಿಕೊಳ್ಳಲಿ. ಈ ಹಿಂದೆಯೇ ಶಾಸಕ ಜಿಟಿ ದೇವೇಗೌಡ ಹಾಗೂ ನಾವೆಲ್ಲರೂ ಸಭೆ ನಡೆಸಿ ಇದರ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ. ಚಾಮುಂಡಿ ಬೆಟ್ಟಕ್ಕೆ ರೋಪ್ವೇ ಮಾಡಲು ನಮ್ಮ ಪ್ರಬಲ ವಿರೋಧವಿದೆ. ಚಾಮುಂಡಿ ಬೆಟ್ಟ ಪ್ರೇಕ್ಷಣೀಯ ಸ್ಥಳವಲ್ಲ, ಧಾರ್ಮಿಕ ತಾಣ. ಚಾಮುಂಡಿ ಬೆಟ್ಟಕ್ಕೆ ಭಕ್ತಿ ಭಾವದಿಂದ ಹೋಗಬೇಕು. ಚಾಮುಂಡಿ ಬೆಟ್ಟ ರೋಪ್ ವೇನಲ್ಲಿ ಹೋಗಿ ನೋಡುವಂತಹ ಸ್ಥಳವಲ್ಲ, ರೋಪ್ ವೇಯನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿಕೆಯನ್ನು ನೀಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…