ಜಿಲ್ಲೆಗಳು

ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ಅಗತ್ಯವಿಲ್ಲ; ಸಂಸದ ಪ್ರತಾಪ್‌ ಸಿಂಹ

ಮೈಸೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ವಿಚಾರ ಸದ್ಯ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ರೋಪ್‌ ವೇ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿಕೆ ನೀಡಿದ್ದು ಸದ್ಯ ಇದರ ವಿರುದ್ಧ ಪರಿಸರ ಪ್ರೇಮಿಗಳು ಕಿಡಿಕಾರಿದ್ದಾರೆ.

ಈ ಸಂಬಂಧ ಇದೀಗ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್‌ ಸಿಂಹ ಸಹ ಮಾತನಾಡಿದ್ದು, ಇದಕ್ಕೆ ತಮ್ಮ ವಿರೋಧವಿದೆ ಎಂಬುದನ್ನು ವ್ಯಕ್ತಪಡಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ಅಗತ್ಯವಿಲ್ಲ, ನಂದಿ ಬೆಟ್ಟಕ್ಕೆ ಬೇಕಾದರೆ ರೋಪ್‌ವೇ ಮಾಡಿಕೊಳ್ಳಲಿ. ಈ ಹಿಂದೆಯೇ ಶಾಸಕ ಜಿಟಿ ದೇವೇಗೌಡ ಹಾಗೂ ನಾವೆಲ್ಲರೂ ಸಭೆ ನಡೆಸಿ ಇದರ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ. ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ಮಾಡಲು ನಮ್ಮ ಪ್ರಬಲ ವಿರೋಧವಿದೆ. ಚಾಮುಂಡಿ ಬೆಟ್ಟ ಪ್ರೇಕ್ಷಣೀಯ ಸ್ಥಳವಲ್ಲ, ಧಾರ್ಮಿಕ ತಾಣ. ಚಾಮುಂಡಿ ಬೆಟ್ಟಕ್ಕೆ ಭಕ್ತಿ ಭಾವದಿಂದ ಹೋಗಬೇಕು. ಚಾಮುಂಡಿ ಬೆಟ್ಟ ರೋಪ್‌ ವೇನಲ್ಲಿ ಹೋಗಿ ನೋಡುವಂತಹ ಸ್ಥಳವಲ್ಲ, ರೋಪ್ ವೇಯನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿಕೆಯನ್ನು ನೀಡಿದರು.

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

1 hour ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

1 hour ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

1 hour ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

13 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

13 hours ago