ಮೈಸೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಮಾಡುವ ವಿಚಾರ ಸದ್ಯ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿಕೆ ನೀಡಿದ್ದು ಸದ್ಯ ಇದರ ವಿರುದ್ಧ ಪರಿಸರ ಪ್ರೇಮಿಗಳು ಕಿಡಿಕಾರಿದ್ದಾರೆ.
ಈ ಸಂಬಂಧ ಇದೀಗ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಸಹ ಮಾತನಾಡಿದ್ದು, ಇದಕ್ಕೆ ತಮ್ಮ ವಿರೋಧವಿದೆ ಎಂಬುದನ್ನು ವ್ಯಕ್ತಪಡಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಮಾಡುವ ಅಗತ್ಯವಿಲ್ಲ, ನಂದಿ ಬೆಟ್ಟಕ್ಕೆ ಬೇಕಾದರೆ ರೋಪ್ವೇ ಮಾಡಿಕೊಳ್ಳಲಿ. ಈ ಹಿಂದೆಯೇ ಶಾಸಕ ಜಿಟಿ ದೇವೇಗೌಡ ಹಾಗೂ ನಾವೆಲ್ಲರೂ ಸಭೆ ನಡೆಸಿ ಇದರ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ. ಚಾಮುಂಡಿ ಬೆಟ್ಟಕ್ಕೆ ರೋಪ್ವೇ ಮಾಡಲು ನಮ್ಮ ಪ್ರಬಲ ವಿರೋಧವಿದೆ. ಚಾಮುಂಡಿ ಬೆಟ್ಟ ಪ್ರೇಕ್ಷಣೀಯ ಸ್ಥಳವಲ್ಲ, ಧಾರ್ಮಿಕ ತಾಣ. ಚಾಮುಂಡಿ ಬೆಟ್ಟಕ್ಕೆ ಭಕ್ತಿ ಭಾವದಿಂದ ಹೋಗಬೇಕು. ಚಾಮುಂಡಿ ಬೆಟ್ಟ ರೋಪ್ ವೇನಲ್ಲಿ ಹೋಗಿ ನೋಡುವಂತಹ ಸ್ಥಳವಲ್ಲ, ರೋಪ್ ವೇಯನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿಕೆಯನ್ನು ನೀಡಿದರು.
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…