ಜಿಲ್ಲೆಗಳು

ರೌಡಿಶೀಟರ್ ಅಕ್ಮಲ್ ಪಾಷ ಗಡಿಪಾರು

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು

ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ ಆರು ತಿಂಗಳವರೆಗೆ ಗಡಿಪಾರು ಆದ ರೌಡಿ.

ಈತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಉದಯಗಿರಿ, ದೇವರಾಜ, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಒಟ್ಟು ೯ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ. ಒಂದು ಪ್ರಕರಣದಲ್ಲಿ ಶಿಕ್ಷೆಯೂ ಆಗಿದೆ. ಇನ್ನು ಕೆಲವು ಪ್ರಕರಣಗಳು ತನಿಖೆಯಲ್ಲಿವೆ.

ಈತನ ವಿರುದ್ಧ ರೌಡಿ ಶೀಟ್ ತೆರೆದು ತೀವ್ರ ನಿಗಾದಲ್ಲಿ ಇಟ್ಟಿದ್ದಾಗಿಯೂ ಈತನು ಪೊಲೀಸರ ಕಣ್ಣು ತಪ್ಪಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಚಟುವಟಿಕೆಯಲ್ಲಿ ತೊಡಗಿದ್ದ. ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ರಾಬರಿ, ಮಹಿಳೆ ಮಾನಭಂಗ, ನಿಂದನೆಗಳಂತ ಅಪರಾಧ ಕೃತ್ಯಗಳಲ್ಲಿ ಭಗಿಯಾಗಿದ್ದು, ಈ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ. ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದು ಕಾರಾಗೃಹದಿಂದ ಬಿಡುಗಡೆಯಾದ ನಂತರವೂ ತನ್ನ ಸಹಚರರನ್ನು ಒಗ್ಗೂಡಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಲು ಪ್ರಯತ್ನಿಸಿದ್ದ.

ತನ್ನ ವಿರುದ್ಧ ಸಾಕ್ಷಿ ನುಡಿಯದಂತೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ವರ್ತಿಸಿ, ಸಮಾಜಘಾತುಕ ಶಕ್ತಿಯಾಗಿ ಗೂಂಡಾವರ್ತನೆಯನ್ನು ಪ್ರದರ್ಶಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡು ಸಾರ್ವಜನಿಕರ ಆಸ್ತಿ ಮತ್ತು ಜೀವ ಹಾನಿ ಮಾಡುವ ಸಂಭವ ಇದೆ ಎಂದು ತಿಳಿದುಬಂದಿದ್ದರಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈತನನ್ನು ಮೈಸೂರು ನಗರದಿಂದ ಮುಂದಿನ ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ. ಗುರುವಾರ ಕೂಡ ಮನು ಎಂಬಾತನನ್ನು ೩ ತಿಂಗಳುಗಳ ಕಾಲ ಗಡಿಪಾರು ಮಾಡಲಾಗಿದೆ.


ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಂಜೆ ೬ ರಿಂದ ರಾತ್ರಿ ೧೦ ಗಂಟೆವರೆಗೆ ನಮ್ಮ ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ನಮ್ಮ ಸಿಬ್ಬಂದಿಗಳು ಏನಾದರೂ ಹಣ ಕೇಳುವುದು, ಇತ್ಯಾದಿ ರೀತಿಯಲ್ಲಿ ವರ್ತಿಸಿದರೆ ನನ್ನ ಗಮನಕ್ಕೆ ತರಬಹುದು. ವಾಹನ ತಪಾಸಣೆ ವೇಳೆ ಮರಗಳ ಮರೆಯಲ್ಲಿ ನಿಂತು ಬೈಕ್‌ಗಳನ್ನು ಹಿಡಿಯಲು ಮುಂದಾಗಬಾರದು, ಸವಾರರಲ್ಲಿ ಗಾಬರಿ ಉಂಟು ಮಾಡಬಾರದು ಎಂದು ಸೂಚಿಸಿದ್ದೇನೆ.

-ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

5 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

7 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

7 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

8 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

8 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

8 hours ago