ಜಿಲ್ಲೆಗಳು

ರೌಡಿಶೀಟರ್ ಅಕ್ಮಲ್ ಪಾಷ ಗಡಿಪಾರು

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು

ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ ಆರು ತಿಂಗಳವರೆಗೆ ಗಡಿಪಾರು ಆದ ರೌಡಿ.

ಈತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಉದಯಗಿರಿ, ದೇವರಾಜ, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಒಟ್ಟು ೯ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ. ಒಂದು ಪ್ರಕರಣದಲ್ಲಿ ಶಿಕ್ಷೆಯೂ ಆಗಿದೆ. ಇನ್ನು ಕೆಲವು ಪ್ರಕರಣಗಳು ತನಿಖೆಯಲ್ಲಿವೆ.

ಈತನ ವಿರುದ್ಧ ರೌಡಿ ಶೀಟ್ ತೆರೆದು ತೀವ್ರ ನಿಗಾದಲ್ಲಿ ಇಟ್ಟಿದ್ದಾಗಿಯೂ ಈತನು ಪೊಲೀಸರ ಕಣ್ಣು ತಪ್ಪಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಚಟುವಟಿಕೆಯಲ್ಲಿ ತೊಡಗಿದ್ದ. ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ರಾಬರಿ, ಮಹಿಳೆ ಮಾನಭಂಗ, ನಿಂದನೆಗಳಂತ ಅಪರಾಧ ಕೃತ್ಯಗಳಲ್ಲಿ ಭಗಿಯಾಗಿದ್ದು, ಈ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ. ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದು ಕಾರಾಗೃಹದಿಂದ ಬಿಡುಗಡೆಯಾದ ನಂತರವೂ ತನ್ನ ಸಹಚರರನ್ನು ಒಗ್ಗೂಡಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಲು ಪ್ರಯತ್ನಿಸಿದ್ದ.

ತನ್ನ ವಿರುದ್ಧ ಸಾಕ್ಷಿ ನುಡಿಯದಂತೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ವರ್ತಿಸಿ, ಸಮಾಜಘಾತುಕ ಶಕ್ತಿಯಾಗಿ ಗೂಂಡಾವರ್ತನೆಯನ್ನು ಪ್ರದರ್ಶಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡು ಸಾರ್ವಜನಿಕರ ಆಸ್ತಿ ಮತ್ತು ಜೀವ ಹಾನಿ ಮಾಡುವ ಸಂಭವ ಇದೆ ಎಂದು ತಿಳಿದುಬಂದಿದ್ದರಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈತನನ್ನು ಮೈಸೂರು ನಗರದಿಂದ ಮುಂದಿನ ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ. ಗುರುವಾರ ಕೂಡ ಮನು ಎಂಬಾತನನ್ನು ೩ ತಿಂಗಳುಗಳ ಕಾಲ ಗಡಿಪಾರು ಮಾಡಲಾಗಿದೆ.


ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಂಜೆ ೬ ರಿಂದ ರಾತ್ರಿ ೧೦ ಗಂಟೆವರೆಗೆ ನಮ್ಮ ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ನಮ್ಮ ಸಿಬ್ಬಂದಿಗಳು ಏನಾದರೂ ಹಣ ಕೇಳುವುದು, ಇತ್ಯಾದಿ ರೀತಿಯಲ್ಲಿ ವರ್ತಿಸಿದರೆ ನನ್ನ ಗಮನಕ್ಕೆ ತರಬಹುದು. ವಾಹನ ತಪಾಸಣೆ ವೇಳೆ ಮರಗಳ ಮರೆಯಲ್ಲಿ ನಿಂತು ಬೈಕ್‌ಗಳನ್ನು ಹಿಡಿಯಲು ಮುಂದಾಗಬಾರದು, ಸವಾರರಲ್ಲಿ ಗಾಬರಿ ಉಂಟು ಮಾಡಬಾರದು ಎಂದು ಸೂಚಿಸಿದ್ದೇನೆ.

-ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ

andolanait

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

2 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

2 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

2 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

2 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

2 hours ago