ಜಿಲ್ಲೆಗಳು

ರೌಡಿಶೀಟರ್ ಅಕ್ಮಲ್ ಪಾಷ ಗಡಿಪಾರು

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು

ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ ಆರು ತಿಂಗಳವರೆಗೆ ಗಡಿಪಾರು ಆದ ರೌಡಿ.

ಈತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಉದಯಗಿರಿ, ದೇವರಾಜ, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಒಟ್ಟು ೯ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ. ಒಂದು ಪ್ರಕರಣದಲ್ಲಿ ಶಿಕ್ಷೆಯೂ ಆಗಿದೆ. ಇನ್ನು ಕೆಲವು ಪ್ರಕರಣಗಳು ತನಿಖೆಯಲ್ಲಿವೆ.

ಈತನ ವಿರುದ್ಧ ರೌಡಿ ಶೀಟ್ ತೆರೆದು ತೀವ್ರ ನಿಗಾದಲ್ಲಿ ಇಟ್ಟಿದ್ದಾಗಿಯೂ ಈತನು ಪೊಲೀಸರ ಕಣ್ಣು ತಪ್ಪಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಚಟುವಟಿಕೆಯಲ್ಲಿ ತೊಡಗಿದ್ದ. ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ರಾಬರಿ, ಮಹಿಳೆ ಮಾನಭಂಗ, ನಿಂದನೆಗಳಂತ ಅಪರಾಧ ಕೃತ್ಯಗಳಲ್ಲಿ ಭಗಿಯಾಗಿದ್ದು, ಈ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ. ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದು ಕಾರಾಗೃಹದಿಂದ ಬಿಡುಗಡೆಯಾದ ನಂತರವೂ ತನ್ನ ಸಹಚರರನ್ನು ಒಗ್ಗೂಡಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಲು ಪ್ರಯತ್ನಿಸಿದ್ದ.

ತನ್ನ ವಿರುದ್ಧ ಸಾಕ್ಷಿ ನುಡಿಯದಂತೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ವರ್ತಿಸಿ, ಸಮಾಜಘಾತುಕ ಶಕ್ತಿಯಾಗಿ ಗೂಂಡಾವರ್ತನೆಯನ್ನು ಪ್ರದರ್ಶಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡು ಸಾರ್ವಜನಿಕರ ಆಸ್ತಿ ಮತ್ತು ಜೀವ ಹಾನಿ ಮಾಡುವ ಸಂಭವ ಇದೆ ಎಂದು ತಿಳಿದುಬಂದಿದ್ದರಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈತನನ್ನು ಮೈಸೂರು ನಗರದಿಂದ ಮುಂದಿನ ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ. ಗುರುವಾರ ಕೂಡ ಮನು ಎಂಬಾತನನ್ನು ೩ ತಿಂಗಳುಗಳ ಕಾಲ ಗಡಿಪಾರು ಮಾಡಲಾಗಿದೆ.


ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಂಜೆ ೬ ರಿಂದ ರಾತ್ರಿ ೧೦ ಗಂಟೆವರೆಗೆ ನಮ್ಮ ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ನಮ್ಮ ಸಿಬ್ಬಂದಿಗಳು ಏನಾದರೂ ಹಣ ಕೇಳುವುದು, ಇತ್ಯಾದಿ ರೀತಿಯಲ್ಲಿ ವರ್ತಿಸಿದರೆ ನನ್ನ ಗಮನಕ್ಕೆ ತರಬಹುದು. ವಾಹನ ತಪಾಸಣೆ ವೇಳೆ ಮರಗಳ ಮರೆಯಲ್ಲಿ ನಿಂತು ಬೈಕ್‌ಗಳನ್ನು ಹಿಡಿಯಲು ಮುಂದಾಗಬಾರದು, ಸವಾರರಲ್ಲಿ ಗಾಬರಿ ಉಂಟು ಮಾಡಬಾರದು ಎಂದು ಸೂಚಿಸಿದ್ದೇನೆ.

-ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ

andolanait

Recent Posts

ಮಾನವತೆಯ ಮೇರು ಸಾಹಿತಿ ದೇಮ

ಮಾನವತೆಯ ಮೇರು ಸಾಹಿತಿ ದೇಮ ದಲಿತ ಸಂವೇದನೆಯ ಅತ್ಯಂತ ಸೃಜನಶೀಲ ಸಾಹಿತಿಗೆ ಸಂದ ಪಂಪ ಪ್ರಶಸ್ತಿ ಗೌರವ ಮೈಸೂರು: ಕನ್ನಡದ…

3 mins ago

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

13 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

13 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

13 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

13 hours ago