ಜಿಲ್ಲೆಗಳು

ರೌಡಿಶೀಟರ್ ಅಕ್ಮಲ್ ಪಾಷ ಗಡಿಪಾರು

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು

ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ ಆರು ತಿಂಗಳವರೆಗೆ ಗಡಿಪಾರು ಆದ ರೌಡಿ.

ಈತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಉದಯಗಿರಿ, ದೇವರಾಜ, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಒಟ್ಟು ೯ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ. ಒಂದು ಪ್ರಕರಣದಲ್ಲಿ ಶಿಕ್ಷೆಯೂ ಆಗಿದೆ. ಇನ್ನು ಕೆಲವು ಪ್ರಕರಣಗಳು ತನಿಖೆಯಲ್ಲಿವೆ.

ಈತನ ವಿರುದ್ಧ ರೌಡಿ ಶೀಟ್ ತೆರೆದು ತೀವ್ರ ನಿಗಾದಲ್ಲಿ ಇಟ್ಟಿದ್ದಾಗಿಯೂ ಈತನು ಪೊಲೀಸರ ಕಣ್ಣು ತಪ್ಪಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಚಟುವಟಿಕೆಯಲ್ಲಿ ತೊಡಗಿದ್ದ. ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ರಾಬರಿ, ಮಹಿಳೆ ಮಾನಭಂಗ, ನಿಂದನೆಗಳಂತ ಅಪರಾಧ ಕೃತ್ಯಗಳಲ್ಲಿ ಭಗಿಯಾಗಿದ್ದು, ಈ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ. ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದು ಕಾರಾಗೃಹದಿಂದ ಬಿಡುಗಡೆಯಾದ ನಂತರವೂ ತನ್ನ ಸಹಚರರನ್ನು ಒಗ್ಗೂಡಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಲು ಪ್ರಯತ್ನಿಸಿದ್ದ.

ತನ್ನ ವಿರುದ್ಧ ಸಾಕ್ಷಿ ನುಡಿಯದಂತೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ವರ್ತಿಸಿ, ಸಮಾಜಘಾತುಕ ಶಕ್ತಿಯಾಗಿ ಗೂಂಡಾವರ್ತನೆಯನ್ನು ಪ್ರದರ್ಶಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡು ಸಾರ್ವಜನಿಕರ ಆಸ್ತಿ ಮತ್ತು ಜೀವ ಹಾನಿ ಮಾಡುವ ಸಂಭವ ಇದೆ ಎಂದು ತಿಳಿದುಬಂದಿದ್ದರಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈತನನ್ನು ಮೈಸೂರು ನಗರದಿಂದ ಮುಂದಿನ ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ. ಗುರುವಾರ ಕೂಡ ಮನು ಎಂಬಾತನನ್ನು ೩ ತಿಂಗಳುಗಳ ಕಾಲ ಗಡಿಪಾರು ಮಾಡಲಾಗಿದೆ.


ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಂಜೆ ೬ ರಿಂದ ರಾತ್ರಿ ೧೦ ಗಂಟೆವರೆಗೆ ನಮ್ಮ ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ನಮ್ಮ ಸಿಬ್ಬಂದಿಗಳು ಏನಾದರೂ ಹಣ ಕೇಳುವುದು, ಇತ್ಯಾದಿ ರೀತಿಯಲ್ಲಿ ವರ್ತಿಸಿದರೆ ನನ್ನ ಗಮನಕ್ಕೆ ತರಬಹುದು. ವಾಹನ ತಪಾಸಣೆ ವೇಳೆ ಮರಗಳ ಮರೆಯಲ್ಲಿ ನಿಂತು ಬೈಕ್‌ಗಳನ್ನು ಹಿಡಿಯಲು ಮುಂದಾಗಬಾರದು, ಸವಾರರಲ್ಲಿ ಗಾಬರಿ ಉಂಟು ಮಾಡಬಾರದು ಎಂದು ಸೂಚಿಸಿದ್ದೇನೆ.

-ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago