ಹುಣಸೂರು: ನಗರ ಠಾಣಾ ವ್ಯಾಪ್ತಿಯಲ್ಲಿ 12 ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ರೌಡಿಶೀಟರ್ ವಾಸಿಂ ಅಲಿಯಾಸ್ ವೀಲ್ ವಾಸಿಂಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ.
ನಗರದ ಮುಸ್ಲಿಂ ಬ್ಲಾಕ್ ನಿವಾಸಿ ಅಕ್ರಂ ಷರೀಫ್ ಅವರ ಪುತ್ರ, ರೌಡಿಶೀಟರ್ ವಾಸಿಂ ಆಲಿಯಅಸ್ ವೀಲ್ ವಾಸಿಮ್ ವಿರುದ್ಧ ನಗರ ಠಾಣೆಯಲ್ಲಿ 12 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತ ಅಕ್ರಮ ಕೂಟದಲ್ಲಿ ಸೇರಿ ದೊಂಬಿ, ಮಹಿಳೆಯರ ಮೇಲೆ ದೌರ್ಜನ್ಯ, ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವುದು ಇತರೆ ಗಂಭೀರ ಆರೋಪಗಳ ಅಪರಾಧಗಳನ್ನು ಮಾಡುತ್ತಿದ್ದರಿಂದ ಗೂಂಡಾ ಕಾಯಿದೆ ಅಡಿಯಲ್ಲಿ ಮುಂದಿನ ಒಂದು ವರ್ಷದವರೆಗೆ ಬಂಧನದಲ್ಲಿ ಇಡಲು ಹೈಕೋರ್ಟ್ ಸಲಹಾ ಮಂಡಳಿಯ ಸೂಚಿಸಿದ್ದು, ಅದರಂತೆ ವಾಸಿಂ ಮುಂದಿನ ವರ್ಷ ಕಾಲ ಹಿಂಡಗಲ ಕಾರಾಗೃಹದಲ್ಲೇ ಕಳೆಯಬೇಕಿದೆ.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಸಲಹಾ ಸಮಿತಿಯ ಮುಂದೆ ಹಾಜರಾಗಿ, ವಾಸಿಂ ಬಂಧನದ ಸಾಕಷ್ಟು ಕಾರಣಗಳನ್ನು ದಾಖಲೆಗಳ ಸಮೇತ ಮಂಡಿಸಿದ್ದರು.





