ಜಿಲ್ಲೆಗಳು

ರೌಡಿಶೀಟರ್ ವೀಲ್‌ ವಾಸಿಂಗೆ ವರ್ಷ ಗಡಿಪಾರು ಶಿಕ್ಷೆ

ಹುಣಸೂರು: ನಗರ ಠಾಣಾ ವ್ಯಾಪ್ತಿಯಲ್ಲಿ 12 ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ರೌಡಿಶೀಟರ್ ವಾಸಿಂ ಅಲಿಯಾಸ್ ವೀಲ್ ವಾಸಿಂಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ.
ನಗರದ ಮುಸ್ಲಿಂ ಬ್ಲಾಕ್ ನಿವಾಸಿ ಅಕ್ರಂ ಷರೀಫ್ ಅವರ ಪುತ್ರ, ರೌಡಿಶೀಟರ್ ವಾಸಿಂ ಆಲಿಯಅಸ್ ವೀಲ್ ವಾಸಿಮ್ ವಿರುದ್ಧ ನಗರ ಠಾಣೆಯಲ್ಲಿ 12 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತ ಅಕ್ರಮ ಕೂಟದಲ್ಲಿ ಸೇರಿ ದೊಂಬಿ, ಮಹಿಳೆಯರ ಮೇಲೆ ದೌರ್ಜನ್ಯ, ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವುದು ಇತರೆ ಗಂಭೀರ ಆರೋಪಗಳ ಅಪರಾಧಗಳನ್ನು ಮಾಡುತ್ತಿದ್ದರಿಂದ ಗೂಂಡಾ ಕಾಯಿದೆ ಅಡಿಯಲ್ಲಿ ಮುಂದಿನ ಒಂದು ವರ್ಷದವರೆಗೆ ಬಂಧನದಲ್ಲಿ ಇಡಲು ಹೈಕೋರ್ಟ್ ಸಲಹಾ ಮಂಡಳಿಯ ಸೂಚಿಸಿದ್ದು, ಅದರಂತೆ ವಾಸಿಂ ಮುಂದಿನ ವರ್ಷ ಕಾಲ ಹಿಂಡಗಲ ಕಾರಾಗೃಹದಲ್ಲೇ ಕಳೆಯಬೇಕಿದೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಸಲಹಾ ಸಮಿತಿಯ ಮುಂದೆ ಹಾಜರಾಗಿ, ವಾಸಿಂ ಬಂಧನದ ಸಾಕಷ್ಟು ಕಾರಣಗಳನ್ನು ದಾಖಲೆಗಳ ಸಮೇತ ಮಂಡಿಸಿದ್ದರು.

 

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

2 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago