ಹುಣಸೂರು: ನಗರ ಠಾಣಾ ವ್ಯಾಪ್ತಿಯಲ್ಲಿ 12 ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ರೌಡಿಶೀಟರ್ ವಾಸಿಂ ಅಲಿಯಾಸ್ ವೀಲ್ ವಾಸಿಂಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ.
ನಗರದ ಮುಸ್ಲಿಂ ಬ್ಲಾಕ್ ನಿವಾಸಿ ಅಕ್ರಂ ಷರೀಫ್ ಅವರ ಪುತ್ರ, ರೌಡಿಶೀಟರ್ ವಾಸಿಂ ಆಲಿಯಅಸ್ ವೀಲ್ ವಾಸಿಮ್ ವಿರುದ್ಧ ನಗರ ಠಾಣೆಯಲ್ಲಿ 12 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತ ಅಕ್ರಮ ಕೂಟದಲ್ಲಿ ಸೇರಿ ದೊಂಬಿ, ಮಹಿಳೆಯರ ಮೇಲೆ ದೌರ್ಜನ್ಯ, ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವುದು ಇತರೆ ಗಂಭೀರ ಆರೋಪಗಳ ಅಪರಾಧಗಳನ್ನು ಮಾಡುತ್ತಿದ್ದರಿಂದ ಗೂಂಡಾ ಕಾಯಿದೆ ಅಡಿಯಲ್ಲಿ ಮುಂದಿನ ಒಂದು ವರ್ಷದವರೆಗೆ ಬಂಧನದಲ್ಲಿ ಇಡಲು ಹೈಕೋರ್ಟ್ ಸಲಹಾ ಮಂಡಳಿಯ ಸೂಚಿಸಿದ್ದು, ಅದರಂತೆ ವಾಸಿಂ ಮುಂದಿನ ವರ್ಷ ಕಾಲ ಹಿಂಡಗಲ ಕಾರಾಗೃಹದಲ್ಲೇ ಕಳೆಯಬೇಕಿದೆ.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಸಲಹಾ ಸಮಿತಿಯ ಮುಂದೆ ಹಾಜರಾಗಿ, ವಾಸಿಂ ಬಂಧನದ ಸಾಕಷ್ಟು ಕಾರಣಗಳನ್ನು ದಾಖಲೆಗಳ ಸಮೇತ ಮಂಡಿಸಿದ್ದರು.
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…