ಜಿಲ್ಲೆಗಳು

ಹನೂರು : RSS ವತಿಯಿಂದ ನಾಳೆ ಪ್ರಾಥಮಿಕ ಶಿಕ್ಷಾವರ್ಗದ ಸಮಾರೋಪ ಸಮಾರಂಭ

ಹನೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಚಾಮರಾಜನಗರ ಜಿಲ್ಲೆ ಪ್ರಾಥಮಿಕ ಶಿಕ್ಷಾವರ್ಗ 2022ರ ಸಾರ್ವಜನಿಕ ಸಮಾರೋಪ ಕಾರ್ಯಕ್ರಮ ಪಟ್ಟಣದ ಬಿ ಎಂ ಜಿ ಶಾಲೆಯಲ್ಲಿ ಜರುಗಲಿದೆ ಎಂದು ಶಿಬಿರ ಕಾರ್ಯವಾಹ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಪಟ್ಟಣದ ಶ್ರೀ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ದ ವತಿಯಿಂದ ಪ್ರಾಥಮಿಕ ಶಿಕ್ಷಾ ವರ್ಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ತರಬೇತಿ ಕಾರ್ಯಕ್ರಮವು ಮುಗಿದಿದ್ದು ಅಕ್ಟೋಬರ್ 14 ರಂದು ಮಧ್ಯಾಹ್ನ 3 ಗಂಟೆಗೆ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಿಂದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ಕಾರ್ಯಕ್ರಮವಿದ್ದು,5ಗಂಟೆಗೆ ಸಮಾರೋಪ ಶಿಬಿರ ಶಿಬಿರಾರ್ಥಿಗಳಿಂದ ಶಾರೀರಿಕ ಪ್ರದರ್ಶನವಿದ್ದು ಅಧ್ಯಕ್ಷತೆಯನ್ನು ಸ್ನೇಹ ನರ್ಸಿಂಗ್ ಹೋಂ ಮುಖ್ಯಸ್ಥರಾದ ಡಾ. ಮಂಜುನಾಥ್ ಸಿ ಹಾಗೂ ಬೌದ್ಧಿಕ ವನ್ನು ಮೈಸೂರು ವಿಭಾಗ ಪ್ರಚಾರ ಪ್ರಮುಖ ಶ್ರೀ ಮೋಹನ್ ರವರು ವಹಿಸಲಿದ್ದಾರೆ .ಆದ್ದರಿಂದ ಹನೂರು ಪಟ್ಟಣದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

16 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

16 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

16 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

16 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

16 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago