ಜಿಲ್ಲೆಗಳು

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್‌ಗೆ ಜಾಮೀನು

ಡಿಸೆಂಬರ್‌ 24ರಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

ಹೋರಾಟಗಾರ್ತಿ ನಜ್ಮಾ ನಝೀರ್‌ ಎಂಬುವವರು ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ ಗಲಭೆ ಹಾಗೂ ಅಶಾಂತಿ ಸೃಷ್ಠಿಸುವ ಹಾಗೆ ಮಾತಾನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಸಹ ಅಣಕಿಸಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದ ಪ್ರಭಾಕರ್‌ ಭಟ್‌ ಎಫ್‌ಐಆರ್‌ ರದ್ದು ಮಾಡುವಂತೆ ಮನವಿ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಜಾಮೀನು ದೊರಕಿದೆ. ಶ್ರೀರಂಗಪಟ್ಟಣದ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ( ಜನವರಿ 17 ) ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇಬ್ಬರು ಸ್ಥಳೀಯರ ಶ್ಯೂರಿಟಿ ಹಾಗೂ 2 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿದೆ.

andolana

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago