ಜಿಲ್ಲೆಗಳು

ಭೈರಪ್ಪಗೆ ತುರ್ತಾಗಿ ಜ್ಞಾನಪೀಠ ಕೊಡಿ: ವಿಶ್ವನಾಥ್‌ ಸಲಹೆ

ಅಡ್ಡಂಡ ಕಾರ್ಯಪ್ಪಗೆ ತುರ್ತಾಗಿ ಎಂಎಲ್‌ಸಿ ಆಗಬೇಕಿದೆ: ಅಡಗೂರು ವ್ಯಂಗ್ಯ

ಮೈಸೂರು: ರಂಗಾಯಣವನ್ನು ಒಂದು ಧರ್ಮದ ವಿರುದ್ಧ ಅಪಪ್ರಚಾರಕ್ಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಚಾರಗಳನ್ನು ಪ್ರಚಾರ ಮಾಡಲು ಬಳಸುತ್ತಿರುವ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ಮೊದಲು ಕಿತ್ತೊಗೆಯಬೇಕು. ಎಂಎಲ್‌ಸಿ ಆಗುವ ಭರದಲ್ಲಿ ಅವರು ನಡೆದುಕೊಳ್ಳುತ್ತಿರುವುದನ್ನು ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ರಂಗಾಯಣ ಸಾಂಸ್ಕೃತಿಕ ಲೋಕದ ತಾಣ. ೧೯೯೩ರಲ್ಲಿ ತಾವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದಾಗ ಕಾನೂನು ಪ್ರಕಾರ ನೋಂದಣಿ ಮಾಡಿ, ವಾರ್ಷಿಕ ನಿರ್ವಹಣೆಗೆ ೨೫ ಲಕ್ಷ ರೂ.ಅನುದಾನ ಮೀಸಲಿಡುವಂತೆ ಮಾಡಲಾಗಿತ್ತು. ಆದರೆ, ಈಗ ರಂಗಾಯಣವನ್ನು ಧರ್ಮದ ಪ್ರಚಾರಕ್ಕೆ ಬಳಸುತ್ತಿರುವುದು ಬೇಸರದ ಸಂಗತಿ ಎಂದರು.

ಅಡ್ಡಂಡ ಹೆಸರಿಂದ ಮೊದಲು ಕಾರ್ಯಪ್ಪ ಎಂಬುದನ್ನು ತೆಗೆಯಬೇಕು. ಕಾರ್ಯಪ್ಪ ದಂಡನಾಯಕರಾಗಿದ್ದವರು. ಅವರ ಹೆಸರನ್ನಿಟ್ಟುಕೊಂಡು ಕೊಡಗಿಗೆ ಅಪಮಾನ ಮಾಡಬೇಡಿ. ಅಡ್ಡಂಡ ಅಡ್ನಾಡಿಯಾಗಿದ್ದಾರೆ. ತುರ್ತಾಗಿ ಎಂಎಲ್‌ಸಿಯಾಗಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಪರಿಷತ್ ಸದಸ್ಯರಾಗಲು ವಾಮಮಾರ್ಗ ಅನುಸರಿಸಬೇಡಿ. ಸಾಂಸ್ಕೃತಿಕ ಲೋಕದ ವಾತಾವರಣವನ್ನು ಹಾಳು ಮಾಡಬೇಡಿ ಎಂದು ಕಿಡಿಕಾರಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಿರ್ದೇಶಕರನ್ನು ಕಿತ್ತೊಗೆಯಬೇಕು. ಇಲ್ಲದಿದ್ದರೆ ರಂಗಾಯಣದ ವಾತಾವರಣ ಮತ್ತಷ್ಟು ಹದಗೆಡಲಿ ಎಂದರು.

ಸಾಹಿತ್ಯ ಕ್ಷೇತ್ರದ ದಿಗ್ಗಜ ಎನ್ನಿಸಿಕೊಂಡ ಎಸ್.ಎಲ್.ಭೈರಪ್ಪ ಅವರು ಅಡ್ಡಂಡ ಜೊತೆಗೂಡಿ ಧರ್ಮದ ವಿರುದ್ಧ ಮಾತನಾಡುತ್ತಿದ್ದಾರೆ. ಅವರಿಗೂ ತುರ್ತಾಗಿ ಜ್ಞಾನಪೀಠ ಪ್ರಶಸ್ತಿ ಬೇಕಾಗಿದೆ. ಆದ್ದರಿಂದ ಅವರಿಗೂ ಜ್ಞಾನಪೀಠ ಪ್ರಶಸ್ತಿ ಕೊಟ್ಟುಬಿಟ್ಟರೆ ಸುಮ್ಮನಾಗುತ್ತಾರೆ ಎಂದು ಟೀಕಿಸಿದರು.

ಯಾವ್ಯಾವ ರೋಗ ಅಂಟಿಸಿಕೊಂಡಿದ್ದೀಯಾ

ನಾನು ಚೆನ್ನಾಗಿದ್ದೇನೆ. ನಿನಗೆ ಏನು ರೋಗ ಬಂದಿದೆ? ಧರ್ಮ, ಜಾತಿ ಸೇರಿದಂತೆ ಯಾವ್ಯಾವ ರೋಗ ಅಂಟಿಕೊಂಡು ಕೂತಿದೆ ಎಂದು ಎ.ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ ವಿರುದ್ಧ ಕುಟುಕಿದರು.

ನಾನು ರಾಜಕೀಯ ಪಕ್ಷದ ತತ್ವ-ಸಿದ್ಧಾಂತದ ಬಗ್ಗೆ ಮಾತನಾಡಲ್ಲ. ಎಲ್ಲಾ ಪಕ್ಷಗಳ ಸಿದ್ಧಾಂತಗಳೂ ಸರಿಯಾಗಿದೆ. ಆದರೆ,ಅದನ್ನು ನಡೆಸುವವರ ನಡವಳಿಕೆ ಮತ್ತು ಮನಸ್ಥಿತಿ ಸರಿಯಿಲ್ಲ ಎಂದು ಹೇಳಿದರು. ತನ್ವೀರ್‌ಸೇಠ್ ಸಾಬ್ರು, ವಿಶ್ವನಾಥ್ ಏನಾಗಿದ್ದಾರೆಂದು ಪ್ರತಾಪ್ ಸಿಂಹ ಪ್ರಶ್ನಿಸಿರುವ ಮಾತಿಗೆ ತೀಕ್ಷ್ಣವಾಗಿಯೇ ತಿರುಗೇಟು ಕೊಟ್ಟ ಎ.ಎಚ್.ವಿಶ್ವನಾಥ್, ನನಗೆ ಏನು ರೋಗ ಬಂದಿದೆಯಾ, ಆರೋಗ್ಯ ಚೆನ್ನಾಗಿದೆ. ನಿಮ್ಮ ಆರೋಗ್ಯ ಸರಿ ಇಲ್ಲದಿರಬಹುದು ಎಂದು ಹೇಳಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರುಣ ಅಥವಾ ಕೋಲಾರದಲ್ಲಿ ಸ್ಪರ್ಧೆ ಮಾಡಿದರೂ ಜಯಗಳಿಸುತ್ತಾರೆ. ಅದರಲ್ಲಿ ಏನು ವಿಶೇಷವಿಲ್ಲ. ನಮ್ಮೂರಿನವರು ಸಿಕ್ಕಿದ್ದಾಗ ಚೆನ್ನಾಗಿದ್ದೀಯಾ ಅಂತ ಕೇಳದೆ ಚೆನ್ನಾಗಿಲ್ಲ ಎನ್ನಲು ಸಾಧ್ಯವೇ? ಸಿದ್ದರಾಮಯ್ಯ ಗೆಲ್ಲುತ್ತಾರೆ ಅಂತ ಹೇಳಿದರೆ ತಪ್ಪೇನೂ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಹಿರಿಯ ನಾಯಕರು. ಅದೇ ರೀತಿ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಕೂಡ ಸ್ನೇಹಿತರೇ ಆಗಿದ್ದಾರೆ. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ ಸೇರುತ್ತಾನೆಂದು ಹೇಳುವವರಿಗೆ ಏನಂಥ ಹೇಳಬೇಕು ಎಂದು ತಿರುಗೇಟು ನೀಡಿದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

7 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

23 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago