ಜಿಲ್ಲೆಗಳು

ಕಲಾವಿದರು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಿ : ಎಸ್.ಟಿ.ಸೋಮಶೇಖರ್

ಮೈಸೂರು: ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ಮೈಸೂರು ದಸರಾವನ್ನು ಆಚರಣೆ ಮಾಡುತ್ತಿದ್ದು, ಈ ಸಂಬಂಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯ ಸದಸ್ಯರು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ದಸರಾ ಯಶಸ್ವಿಗೆ ಶ್ರಮಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ, ದಸರಾ ಉಪಸಮಿತಿಗಳ ಸಿದ್ದತೆಯ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿ ನವೀನ ರೀತಿಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಸರಾಗೆ ಮೆರುಗು ತರಬೇಕು. ವಿದ್ಯುತ್ ದೀಪಾಲಂಕಾರ ಆಕರ್ಷಕವಾಗಿ ಇರಬೇಕು. ಶಿಷ್ಠಾಚಾರದಲ್ಲಿ ಯಾವುದೇ ರೀತಿಯ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ದಸರಾ ಉಪ ಸಮಿತಿಗಳು ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ. ಈ ಬಾರಿಯು ರೈತ ದಸರಾ, ಯೋಗದಸರಾ, ಚಲನಚಿತ್ರೋತ್ಸವ, ದಸರಾ ಕುಸ್ತಿ, ಯುವದಸರಾ, ಯುವಸಂಭ್ರಮ, ಮಹಿಳಾ ದಸರಾ, ಮತ್ಸ ಪ್ರದರ್ಶನ ಮತ್ತು ಮಾರಾಟ, ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಸಬೇಕು ಎಂದು ಸಮಿತಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್, ಮೈಸೂರು ನಗರ ಆಯುಕ್ತರಾದ ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್.ಚೇತನ್, ಅಪರ ಜಿಲ್ಲಾಧಿಕಾರಿಗಳಾದ ಡಾ.ಮಂಜುನಾಥಸ್ವಾಮಿ ಸೇರಿದಂತೆ ವಿವಿಧ ಸಮಿತಿಗಳ ಕಾರ್ಯಾದ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

andolanait

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

7 mins ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

33 mins ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

1 hour ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

1 hour ago

ಬಿರುಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ತೆಂಗಿನ ಮರಗಳು.

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…

2 hours ago

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

4 hours ago