ಭೇರ್ಯ : ಶೀಘ್ರದಲ್ಲೇ ಭೇರ್ಯ ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲಾಗುತ್ತದೆ. ಇದರಿಂದ ಈ ಭಾಗದಲ್ಲಿ ವ್ಯಾಪಾರ, ವಹಿವಾಟು ಹೆಚ್ಚಿ ಭೂಮಿ ಬೆಲೆ ಹೆಚ್ಚಾಗಲಿದೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
ಭೇರ್ಯ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭೇರ್ಯ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಕಾಲೇಜು ಮತ್ತು ಪ್ರೌಢಶಾಲಾ ಕಟ್ಟಡ, ಗಾಂಧಿನಗರ ಬಡಾವಣೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ, ಹೇಮಾವತಿ ನದಿಯಿಂದ ಕುಡಿಯುವ ನೀರು, ಏತನೀರಾವರಿ ಯೋಜನೆ ಮೂಲಕ ಕೆರೆ ತುಂಬಿಸುವುದು, 3.50 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ, ವಿದ್ಯುತ್ ವಿತರಣಾ ಉಪ ಕೇಂದ್ರಕ್ಕೆ ೨ ಕೋಟಿ ರೂ. ವೆಚ್ಚದ ಟ್ರಾನ್ಸ್ಫಾರ್ಮರ್ ಅಳವಡಿಕೆ ಮುಂತಾದ ಹಲವಾರು ಕೆಲಸಗಳನ್ನು ಮಾಡಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಟಿ.ಕುಮಾರ್, ಗ್ರಾ.ಪಂ.ಅಧ್ಯಕ್ಷೆ ಜ್ಯೋತಿ ಮಹೇಶ್ ನಾಯಕ, ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಮೊಹಸಿನ್ ತಾಜ್, ತಾಯಮ್ಮ ರೂಪ ಹರೀಶ್, ಬಿ.ಕೆ.ಕುಮಾರ್, ಬಿ.ಬಿ. ಶಿವಣ್ಣ, ಬಿ.ಎಲ್.ರಾಜಶೇಖರ್, ಜಾ.ದಳ ಮುಖಂಡರಾದ ಅನೀಫ್ ಗೌಡ, ರಾಜಯ್ಯ, ಚಿದಂಬರ, ಚೆಲುವರಾಯ್ಯ, ಜಾನತಾದಳ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಶೀರ್ ಅಹಮದ್ ಖಾನ್, ಸ್ತ್ರೀ ಶಕ್ತಿ ಸ್ವಸಹಾಯ ಮಹಿಳಾ ಸಂಘದ ಮಾಜಿ ಅಧ್ಯಕ್ಷರಾದ ಶಿವಮ್ಮ, ಸಾಲಿಗ್ರಾಮ ರತ್ನಮ್ಮ, ತಹಸಿಲ್ದಾರ್ ಕೆ.ಎನ್.ಮೋಹನ್, ತಾ.ಪಂ. ಇಓ ಹೆಚ್.ಕೆ.ಸತೀಶ್, ಪಿಡಿಒ ಕೆ.ಎ.ಮಂಜುನಾಥ್, ಕೃಷಿ ಸಹಾಯಕ ನಿರ್ದೇಶಕ ಗುರುಪ್ರಸಾದ್, ಜಿ.ಪಂ.ಎಇಇ ವಿನುತ್, ಗಾಮೀಣ ಕುಡಿಯುವ ನೀರು ಎಇಇ ರಾಜುರಾಂ, ಬಿಇಒ ಗಾಯತ್ರಿ, ಪಶುವೈದ್ಯ ಸಹಾಯಕ ನಿರ್ದೇಶಕ ಡಾ.ಮಂಜುನಾಥ್, ಪಶುವೈದ್ಯ ಡಾ.ಹರೀಶ್, ಆರೋಗ್ಯಾಧಿಕಾರಿ ಡಾ. ಮಹೇಂದ್ರಪ್ಪ, ಸಬ್ ಇನ್ಸ್ ಪೆಕ್ಟರ್ ಕುಮುದಾ, ಸಿಡಿಪಿಒ ಪೂರ್ಣಿಮಾ, ರಾಜಸ್ವ ನಿರೀಕ್ಷಕ ಹೇಮಂತ್, ಗ್ರಾಮ ಲೆಕ್ಕಿಗ ರವೀಂದ್ರ, ಇತರರು ಹಾಜರಿದ್ದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…