ಜಿಲ್ಲೆಗಳು

ಶೀಘ್ರದಲ್ಲೇ ಭೇರ್ಯ ಗ್ರಾಮವು ಹೋಬಳಿಯಾಗಲಿದೆ: ಸಾರಾ

ಭೇರ್ಯ : ಶೀಘ್ರದಲ್ಲೇ ಭೇರ್ಯ  ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲಾಗುತ್ತದೆ. ಇದರಿಂದ ಈ ಭಾಗದಲ್ಲಿ ವ್ಯಾಪಾರ, ವಹಿವಾಟು ಹೆಚ್ಚಿ ಭೂಮಿ ಬೆಲೆ ಹೆಚ್ಚಾಗಲಿದೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.

ಭೇರ್ಯ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭೇರ್ಯ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಕಾಲೇಜು ಮತ್ತು ಪ್ರೌಢಶಾಲಾ ಕಟ್ಟಡ, ಗಾಂಧಿನಗರ ಬಡಾವಣೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ, ಹೇಮಾವತಿ ನದಿಯಿಂದ ಕುಡಿಯುವ ನೀರು, ಏತನೀರಾವರಿ ಯೋಜನೆ ಮೂಲಕ ಕೆರೆ ತುಂಬಿಸುವುದು, 3.50 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ, ವಿದ್ಯುತ್ ವಿತರಣಾ ಉಪ ಕೇಂದ್ರಕ್ಕೆ ೨ ಕೋಟಿ ರೂ. ವೆಚ್ಚದ ಟ್ರಾನ್ಸ್‌ಫಾರ್ಮರ್ ಅಳವಡಿಕೆ ಮುಂತಾದ ಹಲವಾರು ಕೆಲಸಗಳನ್ನು ಮಾಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಟಿ.ಕುಮಾರ್, ಗ್ರಾ.ಪಂ.ಅಧ್ಯಕ್ಷೆ ಜ್ಯೋತಿ ಮಹೇಶ್ ನಾಯಕ, ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಮೊಹಸಿನ್ ತಾಜ್, ತಾಯಮ್ಮ ರೂಪ ಹರೀಶ್, ಬಿ.ಕೆ.ಕುಮಾರ್, ಬಿ.ಬಿ. ಶಿವಣ್ಣ, ಬಿ.ಎಲ್.ರಾಜಶೇಖರ್, ಜಾ.ದಳ ಮುಖಂಡರಾದ ಅನೀಫ್ ಗೌಡ, ರಾಜಯ್ಯ, ಚಿದಂಬರ, ಚೆಲುವರಾಯ್ಯ, ಜಾನತಾದಳ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಶೀರ್ ಅಹಮದ್ ಖಾನ್, ಸ್ತ್ರೀ ಶಕ್ತಿ ಸ್ವಸಹಾಯ ಮಹಿಳಾ ಸಂಘದ ಮಾಜಿ ಅಧ್ಯಕ್ಷರಾದ ಶಿವಮ್ಮ, ಸಾಲಿಗ್ರಾಮ ರತ್ನಮ್ಮ, ತಹಸಿಲ್ದಾರ್ ಕೆ.ಎನ್.ಮೋಹನ್, ತಾ.ಪಂ. ಇಓ ಹೆಚ್.ಕೆ.ಸತೀಶ್, ಪಿಡಿಒ ಕೆ.ಎ.ಮಂಜುನಾಥ್, ಕೃಷಿ ಸಹಾಯಕ ನಿರ್ದೇಶಕ ಗುರುಪ್ರಸಾದ್, ಜಿ.ಪಂ.ಎಇಇ ವಿನುತ್, ಗಾಮೀಣ ಕುಡಿಯುವ ನೀರು ಎಇಇ ರಾಜುರಾಂ, ಬಿಇಒ ಗಾಯತ್ರಿ, ಪಶುವೈದ್ಯ ಸಹಾಯಕ ನಿರ್ದೇಶಕ ಡಾ.ಮಂಜುನಾಥ್, ಪಶುವೈದ್ಯ ಡಾ.ಹರೀಶ್, ಆರೋಗ್ಯಾಧಿಕಾರಿ ಡಾ. ಮಹೇಂದ್ರಪ್ಪ, ಸಬ್ ಇನ್ಸ್ ಪೆಕ್ಟರ್ ಕುಮುದಾ, ಸಿಡಿಪಿಒ ಪೂರ್ಣಿಮಾ, ರಾಜಸ್ವ ನಿರೀಕ್ಷಕ ಹೇಮಂತ್, ಗ್ರಾಮ ಲೆಕ್ಕಿಗ ರವೀಂದ್ರ, ಇತರರು ಹಾಜರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

10 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

15 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

16 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

16 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

16 hours ago