ಚಾಮರಾಜನಗರ: ನಗರದ ಮುಸ್ಲಿಂ ಸಮುದಾಯದ ಸಾದಿಕ್ ಉಲ್ಲಾ ಖಾನ್ ಎಂಬ ಯುವಕ ಕಳೆದ ೫ ವರ್ಷಗಳಿಂದ ರಾಷ್ಟ್ರೀಯ ಹಬ್ಬಗಳಲ್ಲಿ ಗಾಂಧೀಜಿಯ ವೇಷಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು ಎಲ್ಲರ ಗಮನ ಸೆಳೆಯುತ್ತಿದ್ದಾನೆ.
ನಗರದ ೫ನೇ ವಾರ್ಡ್ ನ ನಿವಾಸಿ ಜಬ್ಬಾರ್ ಖಾನ್ ಹಾಗೂ ಸಲ್ಮಾ ಬಾನು ಅವರ ಪುತ್ರನಾದ ಸಾದಿಕ್ ಉಲ್ಲಾ ಖಾನ್ ಬಂಜಾರಾ ಶಾಲೆಯಲ್ಲಿ ೬ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ೭೫ ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ವೇಷಧಾರಿಯಾಗಿ ಎಲ್ಲರ ಗಮನ ಸೆಳೆದಿದ್ದಾನೆ. ಸ್ವಯಂ ಪ್ರೇರಿತರಾಗಿ ಗಾಂಧೀಜಿಯ ವೇಷಧಾರಿಯಾಗಿರುವ ಸಾದಿಕ್ ನನ್ನು ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ವೇದಿಕೆಯಲ್ಲಿ ಸನ್ಮಾನಿಸಿದರು.
೫ ವರ್ಷಗಳಿಂದ ಬಣ್ಣ ಹಚ್ಚುವ ಯುವಕ:
ನಗರದಲ್ಲಿ ಹಲಸಿನ ಹಣ್ಣಿನ ವ್ಯಾಪಾರ ಮಾಡಿಕೊಂಡು ಜೀವನ ನಡೆಸುವ ಮುಸ್ಲಿಂ ಸಮುದಾಯದ ಜಬ್ಬರ್ ಖಾನ್ ಕುಟುಂಬ ದೇಶಭಕ್ತಿಯ ಕುರುಹಾಗಿ ಕಳೆದ ೫ ವರ್ಷಗಳಿಂದಲೂ ಮಗನಿಗೆ ಬಣ್ಣ ಹಚ್ಚುತ್ತಾ ಬಂದಿದ್ದು ನಮ್ಮ ದೇಹದ ನರನಾಡಿಗಳಲ್ಲಿ ಈ ದೇಶದ ಅಭಿಮಾನ ತುಂಬಿಕೊಂಡಿದೆ. ಆ ಕಾರಣಕ್ಕಾಗಿಯೇ ನನ್ನ ಮಗನಿಗೆ ವಿವಿಧ ರಾಷ್ಟ್ರೀಯ ನಾಯಕರು ಹಾಗೂ ಹೋರಾಟಗಾರರ ವೇಷಧರಿಸಿ ಈಗೇ ಖುಷಿ ಪಡುತ್ತೇವೆ ಎಂದು ಜಬ್ಬಾರ್ ಖಾನ್ ಅವರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.
ವಿವಿಧ ವೇಷಧಾರಿ:
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗಾಂಧೀಜಿಯ ವೇಷಧಾರಿಯಾಗುವ ಸಾದಿಕ್ ಕೃಷ್ಣ ಜನ್ಮಾಷ್ಟಮಿಯ ದಿನ ಕೃಷ್ಣನ ವೇಷ ಧರಿಸಿ ಹಲವಾರು ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಅದಲ್ಲದೇ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣ, ಟಿಪ್ಪು ಸುಲ್ತಾನ್, ಅಂಬೇಡ್ಕರ್ ಹಾಗೂ ಇತರೆ ರಾಷ್ಟ್ರ ನಾಯಕರ ವೇಷ ಧರಿಸಿ ಎಲ್ಲರ ಗಮನ ಸೆಳೆಯುವ ಸಾದಿಕ್ ಓದಿನಲ್ಲೂ ಮುಂದಿದ್ದು, ಹಲವಾರು ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲೂ ಬೇಷ್ ಎನಿಸಿಕೊಂಡಿದ್ದಾನೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…