ಜಿಲ್ಲೆಗಳು

ಸಾಹಿತ್ಯ ಸಮ್ಮೇಳನಕ್ಕೆ ಕವನ, ವಿವಿಧ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಡ್ಯ: ಸಂಕ್ರಾಂತಿ ಸಂಭ್ರಮದ ಅಂಗವಾಗಿ ಸಾಹುಕಾರ್ ಬಿ.ಎಂ.ರುದ್ರಪ್ಪ ಹಾಗೂ ಗೌರಮ್ಮ ಅವರ ಸ್ಮರಣಾರ್ಥ ಅಖಿಲ ಕರ್ನಾ ಟಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ.೧೪ರಂದು ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದು, ಆಸಕ್ತರಿಂದ ಕವಿಗೋಷ್ಠಿಗೆ ಕವನಗಳನ್ನು ಹಾಗೂ ವಿವಿಧ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ, ಕನ್ನಂಬಾಡಿ ಹಾಗೂ ಕಾವೇರಿ ಪ್ರಭ ದಿನಪತ್ರಿಕೆಯವರ ಸಹಯೋಗದಲ್ಲಿ ಏರ್ಪಡಿಸಿರುವ ಕಾರ್ಯಕ್ರಮಕ್ಕೆ ಆಸಕ್ತರು ೨೦ ಸಾಲಿನ ಎರಡು ಕವನಗಳು, ಕಿರು ಪರಿಚಯ, ಫೋಟೋ, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಡಿ.೧೫ರೊಳಗೆ ಕಳುಹಿಸಬೇಕು. ವ್ಯಾಟ್ಸಾಪ್‌ನಲ್ಲಿ ಮೊದಲು ನೋಂದಣಿ ಮಾಡಿಕೊಂಡು ನಂತರ ಅಂಚೆ ಮೂಲಕ ಕಳುಹಿಸಬೇಕು.
ಆಯ್ಕೆಯಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಐವತ್ತು ಮಂದಿ ಕವಿಗಳಗೆ ಕವಿಗೋಷ್ಠಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಭಾಗವಹಿಸುವ ಕವಿಗಳಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ನೀಡಲಾಗುವುದು. ಇಪ್ಪತ್ತು ಉತ್ತಮ ಕವನಗಳಿಗೆ ‘ಕಾವ್ಯಶ್ರೀ’, ಇಪ್ಪತ್ತು ಮಂದಿ ಸಾಧಕರಿಗೆ ‘ಕನ್ನಡ ರತ್ನ’, ಇಪ್ಪತ್ತು ಮಂದಿ ಸಾಧಕರಿಗೆ ‘ಕಾಯಕ ಯೋಗಿ’ ಮತ್ತು ಜೀವಮಾನದ ಅತ್ಯುತ್ತಮ ಸಾಧನೆಗೆ ೧೦ ಮಂದಿಗೆ ಕರ್ನಾಟಕ ಭೂಷಣ ಪ್ರಶಸ್ತಿಯನ್ನು ನೀಡಲಾಗುವುದು. ಅತ್ಯುತ್ತಮ ಸಾಹಿತ್ಯ ಸೇವೆ ಮಾಡಿದ ಸಾಧಕರನ್ನು ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಗೌರವಿಸಲಾಗುವುದು.
ಆಸಕ್ತರು ಡಿ.೧೫ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ವ್ಯಾಟ್ಸಾಪ್ ಸಂಖ್ಯೆ: ೯೪೪೮೪ ೨೪೩೮೦ಗೆ ಸಂಪರ್ಕಿಸಬೇಕಾಗಿ ಜೀಶಂಪ ವೇದಿಕೆ ಕೋರಿದೆ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

7 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

7 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago