ಜಿಲ್ಲೆಗಳು

ಪಬ್ಬಜ ಶಿಬಿರ ಸಮಾರೋಪ ಸಮಾರಂಭ ಉದ್ಘಾಟಿಸಿದ ಸಾಹಿತಿ ಕೆ.ಎಸ್.ಭಗವಾನ್

ಮೈಸೂರು: ಸ್ವಾಮಿ ವಿವೇಕಾನಂದರನ್ನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಸೀಮಿತ ಮಾಡಿದ್ದಾರೆ. ವಾಸ್ತವಾಗಿ ನೋಡಿದರೆ ವಿವೇಕಾನಂದರು ಹಿಂದೂ ಧರ್ಮವನ್ನು ಒಪ್ಪಿಕೊಂಡಿರಲಿಲ್ಲ. ಅವರ ಸಂಪುಟಗಳನ್ನು ಓದಿದಾಗ ಬುದ್ಧರನ್ನು ಅಪಾರವಾಗಿ ಇಷ್ಟಪಡುತ್ತಿದ್ದರು ಎಂದು ಸಾಹಿತಿ ಹಾಗೂ ಪ್ರಗತಿಪರ ಚಿಂತಕರಾದ ಕೆ.ಎಸ್. ಭಗವಾನ್ ಹೇಳಿದರು.

ವಿಜಯನಗರ ೧ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧವಿಹಾರದಲ್ಲಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಮತ್ತು ಭಾರತೀಯ ಬೌದ್ಧ ಮಹಾಸಭಾದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪಬ್ಬಜ ತರಬೇತಿ ಶಿಬಿರದ ಸಮಾರೋಪ‌ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೂ ಧರ್ಮವನ್ನು ವಿವೇಕಾನಂದರಷ್ಟು ಟೀಕಿಸಿದವರು ಬೇರಾರೂ ಟೀಕಿಸಿಲ್ಲ. ದೀನದಲಿತರನ್ನು ಹಿಂಧೂಧರ್ಮವು ತುಳಿದಷ್ಟೂ ಪ್ರಪಂಚದ ಬೇರಾವ ಧರ್ಮಗಳೂ ತುಳಿಯಲಿಲ್ಲ ಎಂದರು.

ಬುದ್ಧಧಮ್ಮವು ಅನುಭವದ ಮೇಲೆ ನಿಂತಿದೆ. ಇದೊಂದು ವೈಜ್ಞಾನಿಕವಾದ ಧರ್ಮವಾಗಿದೆ. ಆದ್ದರಿಂದಲೇ ಬಾಬಾಸಾಹೇಬರು ಎಲ್ಲಾ ಧರ್ಮಗಳನ್ನು ಅಧ್ಯಯನ ಮಾಡಿ ವೈಜ್ಞಾನಿಕ ಮತ್ತು ವೈಚಾರಿಕವಾದ ಮಾನವೀಯ ಮೌಲ್ಯಗಳನ್ನು ಒಳಗೊಂಡ ಬೌದ್ಧಧರ್ಮಕ್ಕೆ ಸೇರ್ಪಡೆಗೊಂಡರು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ ಬುದ್ಧಧಮ್ಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ, ಆಧ್ಯಾತ್ಮ ಅನ್ವಯಿಸುವಂತಹದ್ದು ಇದು ವಿವರಣೆಗಳಿಗೆ ಸಿಗುವುದಿಲ್ಲ. ಆಚರಿಸುವಂತಹದ್ದಲ್ಲ, ಅದು ಆನಂದವನ್ನುಂಟು ಮಾಡುತ್ತದೆ. ಆನಂದ ಹಂಚಲು ಸಿಗುವುದಿಲ್ಲ ಅನುಭವಿಸಬೇಕು. ಕರುಣೆ, ಪ್ರೀತಿ, ಮಮತೆ ಉಕ್ಕಿ ಹರಿದಾಗ ಆನಂದ ಸಿಗುತ್ತದೆ. ಅಧ್ಯಾತ್ಮ ಅಂತರಂಗದ ವಿಷಯವೇ ಹೊರತು ಬಹಿರಂಗವಲ್ಲ. ಬಹಿರಂಗದಲ್ಲಿ ನಡೆಯುವ ಘಟನೆಗಳು, ವಸ್ತುವಿಷಯಗಳು ನಮ್ಮಲ್ಲಿನ ಭಾವನೆಗಳನ್ನು ಕೆಣಕಿ ಕೆರಳಿಸುತ್ತವೆ. ಆಧ್ಯಾತ್ಮಕ್ಕಾಗಿ ಗುಡಿ- ಗೋಪುರಗಳನ್ನು ಸುತ್ತುವುದು ಮೌಢ್ಯ ವೆನಿಸುತ್ತದೆ ಎಂದು ಹೇಳಿದರು.

ಇದೇ ವೇಳೆ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಡಾ.ಕಲ್ಯಾಣ ಸಿರಿ ಭಂತೇಜಿಯವರು ಪ್ರಮಾಣಪತ್ರಗಳನ್ನು ವಿತರಿಸಿದರು.

ಭಾರತೀಯ ಬೌದ್ಧ ಮಹಾಸಭಾದ ಉಪಾಧ್ಯಕ್ಷ ಮಹೇಂದ್ರ ಮಂಕಾಳೆ ಅಧ್ಯಕ್ಷತೆ ವಹಿಸಿದ್ದರು. ಸಂಘಮಿತ್ರ ಭಂತೇಜಿ, ಸಂಘಸೇವಕ ಭಂತೇಜಿ, ಹೋರಾಟಗಾರ ಮಂಟೇಲಿಂಗಯ್ಯ, ಮನೋಹರ್ ಮೌರ್ಯ, ಬಾಬುರಾವ್ ಅಣದೊರೆ, ಮಾತನಾಡಿದರು. ಅರ್ಜುನ್ ರಾವ್ ಕೇಸರಿ, ಸಮಿತಿಯ ಸಹ ಕಾರ್ಯದರ್ಶಿ ಎಚ್.ಶಿವರಾಜು, ಆರ್.ನಟರಾಜು, ರಾಜು ಹಂಪಾಪುರ, ನಿಸರ್ಗ ಸಿದ್ದರಾಜು, ಟಿ.ಎಂ.ನಾಗರಾಜು, ಡಾ.ಜಗದೀಶ್, ಡಾ.ಜಗನ್ನಾಥ್, ಶಾಂತಿ ಮಂಜು, ಉತ್ತಂಬಳ್ಳಿ ನಾಗರಾಜು, ಮಾ.ನಾಗಯ್ಯ, ಪ್ರೊ.ಅಮೂಲ್ಯ, ಶಾಂತಿ ಮಂಜು, ಡಾ.ಮಂಜು ಸತ್ತಿಗೆಹುಂಡಿ, ನಿರಂಜನ್, ಮೂರ್ತಿ, ಲಕ್ಷ್ಮಣ್, ರೂಪೇಶ್, ಸುರೇಶ್ ಕಂದೇಗಾಲ ಇನ್ನಿತರರು ಹಾಜರಿದ್ದರು.

andolana

Recent Posts

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

8 mins ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

21 mins ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

1 hour ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

2 hours ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

2 hours ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

2 hours ago