ಜಿಲ್ಲೆಗಳು

ಪಬ್ಬಜ ಶಿಬಿರ ಸಮಾರೋಪ ಸಮಾರಂಭ ಉದ್ಘಾಟಿಸಿದ ಸಾಹಿತಿ ಕೆ.ಎಸ್.ಭಗವಾನ್

ಮೈಸೂರು: ಸ್ವಾಮಿ ವಿವೇಕಾನಂದರನ್ನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಸೀಮಿತ ಮಾಡಿದ್ದಾರೆ. ವಾಸ್ತವಾಗಿ ನೋಡಿದರೆ ವಿವೇಕಾನಂದರು ಹಿಂದೂ ಧರ್ಮವನ್ನು ಒಪ್ಪಿಕೊಂಡಿರಲಿಲ್ಲ. ಅವರ ಸಂಪುಟಗಳನ್ನು ಓದಿದಾಗ ಬುದ್ಧರನ್ನು ಅಪಾರವಾಗಿ ಇಷ್ಟಪಡುತ್ತಿದ್ದರು ಎಂದು ಸಾಹಿತಿ ಹಾಗೂ ಪ್ರಗತಿಪರ ಚಿಂತಕರಾದ ಕೆ.ಎಸ್. ಭಗವಾನ್ ಹೇಳಿದರು.

ವಿಜಯನಗರ ೧ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧವಿಹಾರದಲ್ಲಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಮತ್ತು ಭಾರತೀಯ ಬೌದ್ಧ ಮಹಾಸಭಾದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪಬ್ಬಜ ತರಬೇತಿ ಶಿಬಿರದ ಸಮಾರೋಪ‌ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೂ ಧರ್ಮವನ್ನು ವಿವೇಕಾನಂದರಷ್ಟು ಟೀಕಿಸಿದವರು ಬೇರಾರೂ ಟೀಕಿಸಿಲ್ಲ. ದೀನದಲಿತರನ್ನು ಹಿಂಧೂಧರ್ಮವು ತುಳಿದಷ್ಟೂ ಪ್ರಪಂಚದ ಬೇರಾವ ಧರ್ಮಗಳೂ ತುಳಿಯಲಿಲ್ಲ ಎಂದರು.

ಬುದ್ಧಧಮ್ಮವು ಅನುಭವದ ಮೇಲೆ ನಿಂತಿದೆ. ಇದೊಂದು ವೈಜ್ಞಾನಿಕವಾದ ಧರ್ಮವಾಗಿದೆ. ಆದ್ದರಿಂದಲೇ ಬಾಬಾಸಾಹೇಬರು ಎಲ್ಲಾ ಧರ್ಮಗಳನ್ನು ಅಧ್ಯಯನ ಮಾಡಿ ವೈಜ್ಞಾನಿಕ ಮತ್ತು ವೈಚಾರಿಕವಾದ ಮಾನವೀಯ ಮೌಲ್ಯಗಳನ್ನು ಒಳಗೊಂಡ ಬೌದ್ಧಧರ್ಮಕ್ಕೆ ಸೇರ್ಪಡೆಗೊಂಡರು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ ಬುದ್ಧಧಮ್ಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ, ಆಧ್ಯಾತ್ಮ ಅನ್ವಯಿಸುವಂತಹದ್ದು ಇದು ವಿವರಣೆಗಳಿಗೆ ಸಿಗುವುದಿಲ್ಲ. ಆಚರಿಸುವಂತಹದ್ದಲ್ಲ, ಅದು ಆನಂದವನ್ನುಂಟು ಮಾಡುತ್ತದೆ. ಆನಂದ ಹಂಚಲು ಸಿಗುವುದಿಲ್ಲ ಅನುಭವಿಸಬೇಕು. ಕರುಣೆ, ಪ್ರೀತಿ, ಮಮತೆ ಉಕ್ಕಿ ಹರಿದಾಗ ಆನಂದ ಸಿಗುತ್ತದೆ. ಅಧ್ಯಾತ್ಮ ಅಂತರಂಗದ ವಿಷಯವೇ ಹೊರತು ಬಹಿರಂಗವಲ್ಲ. ಬಹಿರಂಗದಲ್ಲಿ ನಡೆಯುವ ಘಟನೆಗಳು, ವಸ್ತುವಿಷಯಗಳು ನಮ್ಮಲ್ಲಿನ ಭಾವನೆಗಳನ್ನು ಕೆಣಕಿ ಕೆರಳಿಸುತ್ತವೆ. ಆಧ್ಯಾತ್ಮಕ್ಕಾಗಿ ಗುಡಿ- ಗೋಪುರಗಳನ್ನು ಸುತ್ತುವುದು ಮೌಢ್ಯ ವೆನಿಸುತ್ತದೆ ಎಂದು ಹೇಳಿದರು.

ಇದೇ ವೇಳೆ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಡಾ.ಕಲ್ಯಾಣ ಸಿರಿ ಭಂತೇಜಿಯವರು ಪ್ರಮಾಣಪತ್ರಗಳನ್ನು ವಿತರಿಸಿದರು.

ಭಾರತೀಯ ಬೌದ್ಧ ಮಹಾಸಭಾದ ಉಪಾಧ್ಯಕ್ಷ ಮಹೇಂದ್ರ ಮಂಕಾಳೆ ಅಧ್ಯಕ್ಷತೆ ವಹಿಸಿದ್ದರು. ಸಂಘಮಿತ್ರ ಭಂತೇಜಿ, ಸಂಘಸೇವಕ ಭಂತೇಜಿ, ಹೋರಾಟಗಾರ ಮಂಟೇಲಿಂಗಯ್ಯ, ಮನೋಹರ್ ಮೌರ್ಯ, ಬಾಬುರಾವ್ ಅಣದೊರೆ, ಮಾತನಾಡಿದರು. ಅರ್ಜುನ್ ರಾವ್ ಕೇಸರಿ, ಸಮಿತಿಯ ಸಹ ಕಾರ್ಯದರ್ಶಿ ಎಚ್.ಶಿವರಾಜು, ಆರ್.ನಟರಾಜು, ರಾಜು ಹಂಪಾಪುರ, ನಿಸರ್ಗ ಸಿದ್ದರಾಜು, ಟಿ.ಎಂ.ನಾಗರಾಜು, ಡಾ.ಜಗದೀಶ್, ಡಾ.ಜಗನ್ನಾಥ್, ಶಾಂತಿ ಮಂಜು, ಉತ್ತಂಬಳ್ಳಿ ನಾಗರಾಜು, ಮಾ.ನಾಗಯ್ಯ, ಪ್ರೊ.ಅಮೂಲ್ಯ, ಶಾಂತಿ ಮಂಜು, ಡಾ.ಮಂಜು ಸತ್ತಿಗೆಹುಂಡಿ, ನಿರಂಜನ್, ಮೂರ್ತಿ, ಲಕ್ಷ್ಮಣ್, ರೂಪೇಶ್, ಸುರೇಶ್ ಕಂದೇಗಾಲ ಇನ್ನಿತರರು ಹಾಜರಿದ್ದರು.

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

1 hour ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

3 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

12 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

12 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

12 hours ago