ಜಿಲ್ಲೆಗಳು

ಫೆ.7 ರಂದು ಮಂಡ್ಯದಲ್ಲಿಲ್ಲ ಬಂದ್; ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿದ ಸಮಾನ ಮನಸ್ಕರ ವೇದಿಕೆ

ಮಂಡ್ಯ: ಜಿಲ್ಲೆಯ ಕೆರಗೋಡು ಹನುಮ ಧ್ವಜ ತೆರವು ಪ್ರಕರಣ ವಿವಾದ ಹಿನ್ನೆಲೆಯಲ್ಲಿ ನಾಳೆ ( ಫೆಬ್ರವರಿ 7 ) ಮಂಡ್ಯ ಬಂದ್‌ಗೆ ಕರೆ ನೀಡಲಾಗಿತ್ತು, ಆದರೆ ಇಂದು ಸಮಾನ ಮನಸ್ಕರ ವೇದಿಕೆಯು ಬಂದ್ ಅನ್ನು ಹಿಂಪಡೆದುಕೊಂಡಿದೆ. ಮಂಡ್ಯ ಬಂದ್ ಅನ್ನು ವಾಪಾಸ್ ಪಡೆಯುವಂತೆ ಜಿಲ್ಲಾಡಳಿತ ಮಾಡಿದ್ದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡು ಈ ಸಂಬಂಧ ಜಿಲ್ಲಾಧಿಕಾರಿಗಳು ಸೇರಿದಂತೆ ವೇದಿಕೆಯ ನಾಯಕರು ಸಂಧಾನ ಸಭೆ ನಡೆಸಿದ್ದು, ಸಭೆಯಲ್ಲಿ ಬಂದ್ ಹಿಂಡೆಯಲಾಗಿದೆ.

ಕೆರಗೋಡಿನ ಹನುಮ ಧ್ವಜ ತೆರವು ವಿವಾದದ ನಂತರ ಧರ್ಮದಂಗಲ್ ಆರಂಭವಾಗಿದ್ದು , ಹನುಮ ಧ್ವಜವನ್ನು ಮತ್ತೆ ಹಾರಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಫೆ.9 ರಂದು ಬಂದ್ ಮಾಡುವುದಾಗಿ ತಿಳಿಸಿದ್ದರು. ಸಮಾನ ಮನಸ್ಕರ ವೇದಿಕೆಯು ಇದನ್ನು ವಿರೋಧಿಸಿ ಫೆ.7ಕ್ಕೆ ಬಂದ್ ಮಾಡುವುದಾಗಿ ಹೇಳಿತ್ತು. ಈ ಬಂದ್‌ಗೆ ಸಿಐಟಿಯು, ಪ್ರಗತಿಪರರು, ದಲಿತ ಪರ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ಸಭೆಯ ನಂತರ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಬಂದ್ ವಾಪಾಸ್ ಪಡೆಯಲಾಗಿದೆ.

ಜಿಲ್ಲಾಡಳಿತದ ಮನವಿಯಂತೆ ಬಂದ್‌ನಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಅಂಗಡಿ ಮುಂಗಟ್ಟುಗಳ ವ್ಯಾಪಾರ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗುವುದರಿಂದ ಮಂಡ್ಯ ಜಿಲ್ಲಾಧಿಕಾರಿಯಾಗಿರುವ ಡಾ.ಕುಮಾರ್, ಎಸ್ಪಿ ಎನ್.ಯತೀಶ್ ರವರ ಸಮ್ಮುಖದಲ್ಲಿ ಸಭೆ ನಡೆಸಲಾಯಿತು.

ಇವುಗಳ ಮಧ್ಯೆ ಫೆ.9ರಂದು ಹಿಂದುಪರ ಸಂಘಟನೆಯು ನೀಡಿರುವ ಬಂದ್‌ಗೆ ಅವಕಾಶ ನೀಡದಂತೆ ಸಮಾನ ಮನಸ್ಕರ ವೇದಿಕೆಯು ಜಿಲ್ಲಾಡಳಿತಕ್ಕೆ ಮನವಿ ಕೋರಿದೆ. ನಾಳೆ ಬಂದ್ ಇಲ್ಲದಿರುವ ಕಾರಣ ಸಾರ್ವಜನಿಕರಲ್ಲಿ ಶಾಂತಿ ಮನೋಭಾವನೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಹಿಂದೂ ಪರ ಸಂಘಟನೆಗಳು ಫೆ.9 ರ ಬಂದ್‌ಗೆ ಏನು ತೀರ್ಮಾನಿಸುತ್ತಾರೆಂದು ನೋಡಬೇಕಿದೆ.

andolana

Recent Posts

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 mins ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

19 mins ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

1 hour ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

2 hours ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

3 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

5 hours ago