ಜಿಲ್ಲೆಗಳು

ಫೆ.7 ರಂದು ಮಂಡ್ಯದಲ್ಲಿಲ್ಲ ಬಂದ್; ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿದ ಸಮಾನ ಮನಸ್ಕರ ವೇದಿಕೆ

ಮಂಡ್ಯ: ಜಿಲ್ಲೆಯ ಕೆರಗೋಡು ಹನುಮ ಧ್ವಜ ತೆರವು ಪ್ರಕರಣ ವಿವಾದ ಹಿನ್ನೆಲೆಯಲ್ಲಿ ನಾಳೆ ( ಫೆಬ್ರವರಿ 7 ) ಮಂಡ್ಯ ಬಂದ್‌ಗೆ ಕರೆ ನೀಡಲಾಗಿತ್ತು, ಆದರೆ ಇಂದು ಸಮಾನ ಮನಸ್ಕರ ವೇದಿಕೆಯು ಬಂದ್ ಅನ್ನು ಹಿಂಪಡೆದುಕೊಂಡಿದೆ. ಮಂಡ್ಯ ಬಂದ್ ಅನ್ನು ವಾಪಾಸ್ ಪಡೆಯುವಂತೆ ಜಿಲ್ಲಾಡಳಿತ ಮಾಡಿದ್ದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡು ಈ ಸಂಬಂಧ ಜಿಲ್ಲಾಧಿಕಾರಿಗಳು ಸೇರಿದಂತೆ ವೇದಿಕೆಯ ನಾಯಕರು ಸಂಧಾನ ಸಭೆ ನಡೆಸಿದ್ದು, ಸಭೆಯಲ್ಲಿ ಬಂದ್ ಹಿಂಡೆಯಲಾಗಿದೆ.

ಕೆರಗೋಡಿನ ಹನುಮ ಧ್ವಜ ತೆರವು ವಿವಾದದ ನಂತರ ಧರ್ಮದಂಗಲ್ ಆರಂಭವಾಗಿದ್ದು , ಹನುಮ ಧ್ವಜವನ್ನು ಮತ್ತೆ ಹಾರಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಫೆ.9 ರಂದು ಬಂದ್ ಮಾಡುವುದಾಗಿ ತಿಳಿಸಿದ್ದರು. ಸಮಾನ ಮನಸ್ಕರ ವೇದಿಕೆಯು ಇದನ್ನು ವಿರೋಧಿಸಿ ಫೆ.7ಕ್ಕೆ ಬಂದ್ ಮಾಡುವುದಾಗಿ ಹೇಳಿತ್ತು. ಈ ಬಂದ್‌ಗೆ ಸಿಐಟಿಯು, ಪ್ರಗತಿಪರರು, ದಲಿತ ಪರ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ಸಭೆಯ ನಂತರ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಬಂದ್ ವಾಪಾಸ್ ಪಡೆಯಲಾಗಿದೆ.

ಜಿಲ್ಲಾಡಳಿತದ ಮನವಿಯಂತೆ ಬಂದ್‌ನಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಅಂಗಡಿ ಮುಂಗಟ್ಟುಗಳ ವ್ಯಾಪಾರ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗುವುದರಿಂದ ಮಂಡ್ಯ ಜಿಲ್ಲಾಧಿಕಾರಿಯಾಗಿರುವ ಡಾ.ಕುಮಾರ್, ಎಸ್ಪಿ ಎನ್.ಯತೀಶ್ ರವರ ಸಮ್ಮುಖದಲ್ಲಿ ಸಭೆ ನಡೆಸಲಾಯಿತು.

ಇವುಗಳ ಮಧ್ಯೆ ಫೆ.9ರಂದು ಹಿಂದುಪರ ಸಂಘಟನೆಯು ನೀಡಿರುವ ಬಂದ್‌ಗೆ ಅವಕಾಶ ನೀಡದಂತೆ ಸಮಾನ ಮನಸ್ಕರ ವೇದಿಕೆಯು ಜಿಲ್ಲಾಡಳಿತಕ್ಕೆ ಮನವಿ ಕೋರಿದೆ. ನಾಳೆ ಬಂದ್ ಇಲ್ಲದಿರುವ ಕಾರಣ ಸಾರ್ವಜನಿಕರಲ್ಲಿ ಶಾಂತಿ ಮನೋಭಾವನೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಹಿಂದೂ ಪರ ಸಂಘಟನೆಗಳು ಫೆ.9 ರ ಬಂದ್‌ಗೆ ಏನು ತೀರ್ಮಾನಿಸುತ್ತಾರೆಂದು ನೋಡಬೇಕಿದೆ.

andolana

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

31 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago