ಮಂಡ್ಯ: ಜಿಲ್ಲೆಯ ಕೆರಗೋಡು ಹನುಮ ಧ್ವಜ ತೆರವು ಪ್ರಕರಣ ವಿವಾದ ಹಿನ್ನೆಲೆಯಲ್ಲಿ ನಾಳೆ ( ಫೆಬ್ರವರಿ 7 ) ಮಂಡ್ಯ ಬಂದ್ಗೆ ಕರೆ ನೀಡಲಾಗಿತ್ತು, ಆದರೆ ಇಂದು ಸಮಾನ ಮನಸ್ಕರ ವೇದಿಕೆಯು ಬಂದ್ ಅನ್ನು ಹಿಂಪಡೆದುಕೊಂಡಿದೆ. ಮಂಡ್ಯ ಬಂದ್ ಅನ್ನು ವಾಪಾಸ್ ಪಡೆಯುವಂತೆ ಜಿಲ್ಲಾಡಳಿತ ಮಾಡಿದ್ದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡು ಈ ಸಂಬಂಧ ಜಿಲ್ಲಾಧಿಕಾರಿಗಳು ಸೇರಿದಂತೆ ವೇದಿಕೆಯ ನಾಯಕರು ಸಂಧಾನ ಸಭೆ ನಡೆಸಿದ್ದು, ಸಭೆಯಲ್ಲಿ ಬಂದ್ ಹಿಂಡೆಯಲಾಗಿದೆ.
ಕೆರಗೋಡಿನ ಹನುಮ ಧ್ವಜ ತೆರವು ವಿವಾದದ ನಂತರ ಧರ್ಮದಂಗಲ್ ಆರಂಭವಾಗಿದ್ದು , ಹನುಮ ಧ್ವಜವನ್ನು ಮತ್ತೆ ಹಾರಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಫೆ.9 ರಂದು ಬಂದ್ ಮಾಡುವುದಾಗಿ ತಿಳಿಸಿದ್ದರು. ಸಮಾನ ಮನಸ್ಕರ ವೇದಿಕೆಯು ಇದನ್ನು ವಿರೋಧಿಸಿ ಫೆ.7ಕ್ಕೆ ಬಂದ್ ಮಾಡುವುದಾಗಿ ಹೇಳಿತ್ತು. ಈ ಬಂದ್ಗೆ ಸಿಐಟಿಯು, ಪ್ರಗತಿಪರರು, ದಲಿತ ಪರ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ಸಭೆಯ ನಂತರ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಬಂದ್ ವಾಪಾಸ್ ಪಡೆಯಲಾಗಿದೆ.
ಜಿಲ್ಲಾಡಳಿತದ ಮನವಿಯಂತೆ ಬಂದ್ನಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಅಂಗಡಿ ಮುಂಗಟ್ಟುಗಳ ವ್ಯಾಪಾರ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗುವುದರಿಂದ ಮಂಡ್ಯ ಜಿಲ್ಲಾಧಿಕಾರಿಯಾಗಿರುವ ಡಾ.ಕುಮಾರ್, ಎಸ್ಪಿ ಎನ್.ಯತೀಶ್ ರವರ ಸಮ್ಮುಖದಲ್ಲಿ ಸಭೆ ನಡೆಸಲಾಯಿತು.
ಇವುಗಳ ಮಧ್ಯೆ ಫೆ.9ರಂದು ಹಿಂದುಪರ ಸಂಘಟನೆಯು ನೀಡಿರುವ ಬಂದ್ಗೆ ಅವಕಾಶ ನೀಡದಂತೆ ಸಮಾನ ಮನಸ್ಕರ ವೇದಿಕೆಯು ಜಿಲ್ಲಾಡಳಿತಕ್ಕೆ ಮನವಿ ಕೋರಿದೆ. ನಾಳೆ ಬಂದ್ ಇಲ್ಲದಿರುವ ಕಾರಣ ಸಾರ್ವಜನಿಕರಲ್ಲಿ ಶಾಂತಿ ಮನೋಭಾವನೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಹಿಂದೂ ಪರ ಸಂಘಟನೆಗಳು ಫೆ.9 ರ ಬಂದ್ಗೆ ಏನು ತೀರ್ಮಾನಿಸುತ್ತಾರೆಂದು ನೋಡಬೇಕಿದೆ.
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…