ಜಿಲ್ಲೆಗಳು

ಕಡವೆ ಬೇಟೆ ಪ್ರಕರಣ: 60 ಕೆಜಿ ಮಾಂಸ ವಶಕ್ಕೆ, ತಲೆಮರೆಸಿಕೊಂಡ ಆರೋಪಿಗಳು

ಗೋಣಿಕೊಪ್ಪ: ಹಾತೂರು ಗ್ರಾಮದಲ್ಲಿ ಕಡವೆ ಬೇಟೆ ಮಾಡಿರುವ ಪ್ರಕರಣದಲ್ಲಿ ಸೋಮವಾರ ೬೦ ಕೆ.ಜಿ. ಕಡವೆ ಮಾಂಸ ವಶ ಪಡಿಸಿಕೊಂಡಿದ್ದು, ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಕಡವೆಯನ್ನು ಕೊಂದು ಮಾಂಸ ಮಾರಾಟಕ್ಕೆ ಮುಂದಾಗಿದ್ದ ಸಂದರ್ಭ ಸ್ಥಳಕ್ಕೆ ವಿರಾಜಪೇಟೆ ಅರಣ್ಯ ವಲಯದ ಕಾರ್ಯಾಚರಣೆ ತಂಡ ದಾಳಿ ಮಾಡಿದೆ. ಈ ಸಂದರ್ಭ ೬೦ ಕೆಜಿ ಮಾಂಸ ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಮನೆ ಮಾಲೀಕ ಕೊಕ್ಕಂಡ ಸತ್ಯುಂಜಯ ಹಾಗೂ ಗೋಣಿಕೊಪ್ಪ ನಿವಾಸಿ ಶರಣು ಮತ್ತು ಇತರರ ಮೇಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಪೊನ್ನಂಪೇಟೆ ಆರ್‌ಎಫ್‌ಒ ಶಂಕರ ಅವರಿಗೆ ಹಸ್ತಾಂತರಿಸಲಾಗಿದೆ.
ವಿರಾಜಪೇಟೆ ಡಿಸಿಎಫ್ ವೈ. ಚಕ್ರಪಾಣಿ ಮಾರ್ಗದರ್ಶನದಲ್ಲಿ ಎಸಿಎಫ್ ಕೊಚ್ಚೆರ ಎ. ನೆಹರು, ಆರ್‌ಎಫ್‌ಒ ಕಳ್ಳಿರ ದೇವಯ್ಯ, ಡಿಆರ್‌ಎಫ್‌ಒ ಶ್ರೀಶೈಲ ಮಾಲಿಗೌಡ್ರ, ದೇಯಂಡ ಸಂಜಿತ್ ಸೋಮಯ್ಯ, ಸಿಬ್ಬಂದಿ ಸಿ. ಅರುಣಾ, ಮಾಲತೇಶ್ ಬಡಿಗೇರ್, ಚಂದ್ರಶೇಖರ ಅಮರಗೋಳ, ಅಶೋಕ, ಆರ್‌ಆರ್‌ಟಿ ಸಿಬ್ಬಂದಿ ಅನಿಲ್, ವಿಕಾಸ್, ಸುರೇಶ, ಮಹೇಶ್, ನಾಚಪ್ಪ, ಮುರುಗನ್, ಮಂಜು, ಸಚಿನ್, ವಿನೋದ್, ವಿನು, ಅಚ್ಚಯ್ಯ ಇದ್ದರು.

andolanait

Recent Posts

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

1 hour ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

2 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

3 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

3 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

4 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

7 hours ago