ಜಿಲ್ಲೆಗಳು

ಕಡವೆ ಬೇಟೆ ಪ್ರಕರಣ: 60 ಕೆಜಿ ಮಾಂಸ ವಶಕ್ಕೆ, ತಲೆಮರೆಸಿಕೊಂಡ ಆರೋಪಿಗಳು

ಗೋಣಿಕೊಪ್ಪ: ಹಾತೂರು ಗ್ರಾಮದಲ್ಲಿ ಕಡವೆ ಬೇಟೆ ಮಾಡಿರುವ ಪ್ರಕರಣದಲ್ಲಿ ಸೋಮವಾರ ೬೦ ಕೆ.ಜಿ. ಕಡವೆ ಮಾಂಸ ವಶ ಪಡಿಸಿಕೊಂಡಿದ್ದು, ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಕಡವೆಯನ್ನು ಕೊಂದು ಮಾಂಸ ಮಾರಾಟಕ್ಕೆ ಮುಂದಾಗಿದ್ದ ಸಂದರ್ಭ ಸ್ಥಳಕ್ಕೆ ವಿರಾಜಪೇಟೆ ಅರಣ್ಯ ವಲಯದ ಕಾರ್ಯಾಚರಣೆ ತಂಡ ದಾಳಿ ಮಾಡಿದೆ. ಈ ಸಂದರ್ಭ ೬೦ ಕೆಜಿ ಮಾಂಸ ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಮನೆ ಮಾಲೀಕ ಕೊಕ್ಕಂಡ ಸತ್ಯುಂಜಯ ಹಾಗೂ ಗೋಣಿಕೊಪ್ಪ ನಿವಾಸಿ ಶರಣು ಮತ್ತು ಇತರರ ಮೇಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಪೊನ್ನಂಪೇಟೆ ಆರ್‌ಎಫ್‌ಒ ಶಂಕರ ಅವರಿಗೆ ಹಸ್ತಾಂತರಿಸಲಾಗಿದೆ.
ವಿರಾಜಪೇಟೆ ಡಿಸಿಎಫ್ ವೈ. ಚಕ್ರಪಾಣಿ ಮಾರ್ಗದರ್ಶನದಲ್ಲಿ ಎಸಿಎಫ್ ಕೊಚ್ಚೆರ ಎ. ನೆಹರು, ಆರ್‌ಎಫ್‌ಒ ಕಳ್ಳಿರ ದೇವಯ್ಯ, ಡಿಆರ್‌ಎಫ್‌ಒ ಶ್ರೀಶೈಲ ಮಾಲಿಗೌಡ್ರ, ದೇಯಂಡ ಸಂಜಿತ್ ಸೋಮಯ್ಯ, ಸಿಬ್ಬಂದಿ ಸಿ. ಅರುಣಾ, ಮಾಲತೇಶ್ ಬಡಿಗೇರ್, ಚಂದ್ರಶೇಖರ ಅಮರಗೋಳ, ಅಶೋಕ, ಆರ್‌ಆರ್‌ಟಿ ಸಿಬ್ಬಂದಿ ಅನಿಲ್, ವಿಕಾಸ್, ಸುರೇಶ, ಮಹೇಶ್, ನಾಚಪ್ಪ, ಮುರುಗನ್, ಮಂಜು, ಸಚಿನ್, ವಿನೋದ್, ವಿನು, ಅಚ್ಚಯ್ಯ ಇದ್ದರು.

andolanait

Recent Posts

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

7 mins ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

13 mins ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

18 mins ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

21 mins ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

27 mins ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

30 mins ago