ಗೋಣಿಕೊಪ್ಪ: ಹಾತೂರು ಗ್ರಾಮದಲ್ಲಿ ಕಡವೆ ಬೇಟೆ ಮಾಡಿರುವ ಪ್ರಕರಣದಲ್ಲಿ ಸೋಮವಾರ ೬೦ ಕೆ.ಜಿ. ಕಡವೆ ಮಾಂಸ ವಶ ಪಡಿಸಿಕೊಂಡಿದ್ದು, ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಕಡವೆಯನ್ನು ಕೊಂದು ಮಾಂಸ ಮಾರಾಟಕ್ಕೆ ಮುಂದಾಗಿದ್ದ ಸಂದರ್ಭ ಸ್ಥಳಕ್ಕೆ ವಿರಾಜಪೇಟೆ ಅರಣ್ಯ ವಲಯದ ಕಾರ್ಯಾಚರಣೆ ತಂಡ ದಾಳಿ ಮಾಡಿದೆ. ಈ ಸಂದರ್ಭ ೬೦ ಕೆಜಿ ಮಾಂಸ ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಮನೆ ಮಾಲೀಕ ಕೊಕ್ಕಂಡ ಸತ್ಯುಂಜಯ ಹಾಗೂ ಗೋಣಿಕೊಪ್ಪ ನಿವಾಸಿ ಶರಣು ಮತ್ತು ಇತರರ ಮೇಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಪೊನ್ನಂಪೇಟೆ ಆರ್ಎಫ್ಒ ಶಂಕರ ಅವರಿಗೆ ಹಸ್ತಾಂತರಿಸಲಾಗಿದೆ.
ವಿರಾಜಪೇಟೆ ಡಿಸಿಎಫ್ ವೈ. ಚಕ್ರಪಾಣಿ ಮಾರ್ಗದರ್ಶನದಲ್ಲಿ ಎಸಿಎಫ್ ಕೊಚ್ಚೆರ ಎ. ನೆಹರು, ಆರ್ಎಫ್ಒ ಕಳ್ಳಿರ ದೇವಯ್ಯ, ಡಿಆರ್ಎಫ್ಒ ಶ್ರೀಶೈಲ ಮಾಲಿಗೌಡ್ರ, ದೇಯಂಡ ಸಂಜಿತ್ ಸೋಮಯ್ಯ, ಸಿಬ್ಬಂದಿ ಸಿ. ಅರುಣಾ, ಮಾಲತೇಶ್ ಬಡಿಗೇರ್, ಚಂದ್ರಶೇಖರ ಅಮರಗೋಳ, ಅಶೋಕ, ಆರ್ಆರ್ಟಿ ಸಿಬ್ಬಂದಿ ಅನಿಲ್, ವಿಕಾಸ್, ಸುರೇಶ, ಮಹೇಶ್, ನಾಚಪ್ಪ, ಮುರುಗನ್, ಮಂಜು, ಸಚಿನ್, ವಿನೋದ್, ವಿನು, ಅಚ್ಚಯ್ಯ ಇದ್ದರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…